
ಬಾಗಲಕೋಟೆ: ಮದುವೆಯಾಗಬೇಕಿದ್ದ ಯುವಕನೊಬ್ಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಂದು ಆಶೀರ್ವದಿಸುವ ತನಕ ತಾಳಿಕಟ್ಟುವುದಿಲ್ಲ ಎಂದು ಹಠ ಹಿಡಿದು ಕುಳಿತ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ತೆಗ್ಗಿ ಗ್ರಾಮದ ಶ್ರೀಶೈಲ್ ಎಂಬುವಾತನೇ ಆ ಯುವಕ. ಕುಮಾರಸ್ವಾಮಿಯವರ ಸಮ್ಮುಖದಲ್ಲೇ ಮದುವೆಯಾಗುವುದಾಗಿ ಒಂದು ವರ್ಷದಿಂದ ಹಠ ಹಿಡಿದು ಕುಳಿತಿದ್ದ. ಇದೀಗ ಸ್ವತಃ ಕುಮಾರಸ್ವಾಮಿಯವರೇ ತೆರಳಿದ ಮೇಲೆ ವಧುವಿಗೆ ತಾಳಿ ಕಟ್ಟಿದ್ದಾನೆ.
ಗ್ರಾಮದ ಸೋಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಮದುವೆಗೆ ಹೆಚ್ ಡಿಕೆ ಖುದ್ದಾಗಿ ಹಾಜರಿದ್ದು ನೂತನ ವಧುವರರನ್ನು ಆಶೀರ್ವದಿಸಿ ಬಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.