ನೆಹರೂ-ಗಾಂಧಿ ಪರಿವಾರಕ್ಕೆ ಬ್ರ್ಯಾಂಡ್ ವ್ಯಾಲ್ಯೂ ಇದೆ: ಅಧೀರ್ ಚೌಧರಿ!

Published : Aug 17, 2019, 07:52 PM IST
ನೆಹರೂ-ಗಾಂಧಿ ಪರಿವಾರಕ್ಕೆ ಬ್ರ್ಯಾಂಡ್ ವ್ಯಾಲ್ಯೂ ಇದೆ: ಅಧೀರ್ ಚೌಧರಿ!

ಸಾರಾಂಶ

‘ನೆಹರೂ-ಗಾಂಧಿ ಪರಿವಾರದ ವ್ಯಕ್ತಿಯೇ ಕಾಂಗ್ರೆಸ್ ಅಧ್ಯಕ್ಷನಾಗಬೇಕು’| ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅಭಿಮತ| ನೆಹರೂ-ಗಾಂಧಿ ಪರಿವಾರಕ್ಕೆ ಬ್ರ್ಯಾಂಡ್ ವ್ಯಾಲ್ಯೂ ಇದೆ ಎಂದ ಅಧೀರ್ ಚೌಧರಿ| ‘ಬಿಜೆಪಿಯ ಕೋಮುವಾದಿ ಅಜೆಂಡಾ ಸೋಲಿಸುವುದು ಕಾಂಗ್ರೆಸ್’ನಿಂದ ಮಾತ್ರ ಸಾಧ್ಯ’| ‘ಎರಡು ಭಿನ್ನ ಸಿದ್ಧಾಂತವುಳ್ಳ ರಾಷ್ಟ್ರೀಯ ಪಕ್ಷಗಳ ನಡುವೆ ಪೈಪೋಟಿ’|

ನವದೆಹಲಿ(ಆ.17): ಗಾಂಧಿ-ನಮೆಹರೂ ಕುಟುಂಬಕ್ಕೆ ತನ್ನದೇ ಆದ ನಾಮ ಮೌಲ್ಯವಿದ್ದು, ಈ ಪರಿವಾರದ ವ್ಯಕ್ತಿಯೇ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ಲೋಕಸಭೆಯ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಚೌಧರಿ, ನೆಹರೂ-ಗಾಂಧಿ ಕುಟುಂಬದ ಹೆಸರಿಗೆ ಬ್ರ್ಯಾಂಡ್ ವ್ಯಾಲ್ಯೂ ಇದ್ದು, ಆ ಕುಟುಂಬದ ವ್ಯಕ್ತಿಯೇ ಅಧ್ಯಕ್ಷ ಸ್ಥಾನ ಅಲಂಕರಿಸಬೇಕು ಎಂದು ಹೇಳಿದ್ದಾರೆ.

ಜಾತ್ಯಾತೀತ, ಆಧುನಿಕ ಭಾರತದ ನಿರ್ಮಾಣ ಕಾಂಗ್ರೆಸ್’ನಿಂದ ಮಾತ್ರ ಸಾಧ್ಯ ಎಂದು ಹೇಳಿರವ ಚೌಧರಿ, ಬಿಜೆಪಿಯ ಕೋಮುವಾದಿ ಅಜೆಂಡಾವನ್ನು ಸೋಲಿಸುವುದು ಕಾಂಗ್ರೆಸ್’ನಿಂದ ಮಾತ್ರ ಸಾಧ್ಯ ಎಂದೂ  ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಪ್ರಾದೇಶಿಕ ಪಕ್ಷಗಳು ಶೀಘ್ರದಲ್ಲೇ ತಮ್ಮ ಅಸ್ತಿತ್ವ ಕಳೆದುಕೊಳ್ಳಲಿವೆ ಎಂದಿರುವ ಅಧೀರ್ ಚೌಧರಿ, ಭಾರತದಲ್ಲಿ ಎರಡು ಭಿನ್ನ ಸಿದ್ಧಾಂತವುಳ್ಳ ರಾಷ್ಟ್ರೀಯ ಪಕ್ಷಗಳ ನಡುವೆ ಪೈಪೋಟಿ ನಡೆಯಲಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರಕನ್ನಡ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಖದೀಮರು ಎಸ್ಕೇಪ್!
ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು