
ನವದೆಹಲಿ(ಡಿ.15): ಸಂಸತ್ ಚಳಿಗಾಲದ ಅಧಿವೇಶನ ಆರಂಭವಾದಾಗಿನಿಂದ ಬರೀ ಗದ್ದಲ, ಕೋಲಾಹಲದಲ್ಲೇ ಮುಳುಗಿ ಹೋಗಿದೆ. ಇವತ್ತು ಕೂಡ ನೋಟ್ ಬ್ಯಾನ್ ಕುರಿತು ಮೋದಿ ಉತ್ತರ ನೀಡಲಿಲ್ಲ. ಹೀಗಾಗಿ, ವಿಪಕ್ಷಗಳು ಇವತ್ತೂ ಸಹ ಗದ್ದಲ-ಕೋಲಾಹಲ ಎಬ್ಬಿಸಿದ್ರಿಂದ ಕಲಾಪ ಮುಂದೂಡಲಾಯ್ತು. ಸ್ಪೀಕರ್ ಸುಮಿತ್ರ ಮಹಾಜನ್ ಕಲಾಪವನ್ನ ನಾಳೆಗೆ ಮುಂದೂಡಿಕೆ ಮಾಡುತ್ತಲೇ ಅಡ್ವಾಣಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೊದಲಿಗೆ ಸ್ಮೃತಿ ಇರಾನಿ ಬಳಿ ತಮ್ಮ ಕೋಪವನ್ನ ವ್ಯಕ್ತಪಡಿಸಿದ ಅಡ್ವಾಣಿ ಬಳಿಕ ರಾಜನಾಥ್ ಸಿಂಗ್ ಬಳಿ ಅಸಮಾಧಾನವನ್ನ ವಿವರಿಸಿದ್ದಾರೆ. ನಾನೇಕೆ ಇಂತಹ ಸದನದಲ್ಲಿ ಮುಂದುವರೆಯಲಿ, ರಾಜೀನಾಮೆ ನೀಡಬೇಕಾ? ಎಂದು ಪ್ರಶ್ನಿಸಿದ್ದಾರೆ. ಸ್ಪೀಕರ್ ಸಭೆ ಕರೆದು ನಾಳೆ ಕಲಾಪ ನಡೆಯುವಂತೆ ನೋಡಿಕೊಳ್ಳಬೇಕೆಂದು ಅಡ್ವಾಣಿ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.