
ಉಡುಪಿ: ಬಿಜೆಪಿಯ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರು ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ಭಾಗವಹಿಸಿದ್ದರೇ ಹೊರತು, ಭ್ರಷ್ಟಾಚಾರದ ಆರೋಪಿ ಅಲ್ಲ. ನಮ್ಮ ದೇಶದಲ್ಲಿ ಭ್ರಷ್ಟಾಚಾರದ ಆರೋಪಿಗಳೇ ಅಧಿಕಾರದಲ್ಲಿ ಮುಂದುವರಿದಿದ್ದರು. ಹಾಗಿರುವಾಗ ಕೇವಲ ಹೋರಾಟದಲ್ಲಿ ಪಾಲ್ಗೊಂಡ ಅಡ್ವಾಣಿ ಅವರನ್ನು ರಾಷ್ಟ್ರಪತಿಯನ್ನಾಗಿ ಆರಿಸುವುದರಲ್ಲಿ ತಪ್ಪೇನಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ ಅಡ್ವಾಣಿ ಅವರು ಅಪರಾಧಿ ಅಲ್ಲ, ವಾಸ್ತವದಲ್ಲಿ ಅವರು ಬಾಬ್ರಿ ಮಸೀದಿ ಧ್ವಂಸವಾದಾಗ ಅತ್ಯಂತ ದುಃಖಪಟ್ಟಿದ್ದರು ಎಂದು ಹಳೇ ಘಟನೆ ನೆನಪಿಸಿಕೊಂಡರು. ಕೇಂದ್ರ ಸಚಿವೆ ಉಮಾಭಾರತಿ ಕೂಡ ರಾಮಮಂದಿರ ಹೋರಾಟದಲ್ಲಿ ಭಾಗವಹಿಸಿದ್ದರು. ಅವರು ಕೂಡ ಭ್ರಷ್ಟಾಚಾರ ಆರೋಪಿ ಅಲ್ಲ. ಹಿಂದೆ ಲಾಲು ಪ್ರಸಾದ್ ಯಾದವ್, ಜಯಲಲಿತಾರ ಮೇಲೆ ಭ್ರಷ್ಟಾಚಾರದ ಭಾರೀ ಆರೋಪಗಳಿದ್ದಾಗಲೂ ಅವರು ರಾಜಿನಾಮೆ ನೀಡದೆ ಅಧಿಕಾರದಲ್ಲಿ ಮುಂದುವರಿದಿದ್ದರು. ಹಾಗಿರುವಾಗ ಉಮಾಭಾರತಿಯಂಥವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕಿಲ್ಲ ಎಂದು ಅವರು ತಮ್ಮ ಶಿಷ್ಯೆಯನ್ನು ಸಮರ್ಥಿಸಿಕೊಂಡರು.
ಒಂದು ವೇಳೆ ಕೋರ್ಟ್ ಅಡ್ವಾಣಿ ಮತ್ತು ಉಮಾಭಾರತಿ ಅವರನ್ನು ರಾಮಮಂದಿರ ಹೋರಾಟದಲ್ಲಿ ತಪ್ಪಿತಸ್ಥರು ಎಂದು ಹೇಳಿದರೂ ಅವರು ತಮ್ಮ ರಾಜಕೀಯ ಸ್ಥಾನಗಳಿಗೆ ರಾಜಿನಾಮೆ ನೀಡಬೇಕಾಗಿಲ್ಲ ಎಂದು ಪೇಜಾವರ ಶ್ರೀಗಳು ಅಭಿಪ್ರಾಯಪಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.