
ನವದೆಹಲಿ(ಆ.19): ವಿಶಾಲ್ ಸಿಕ್ಕಾ ಇನ್ಫೋಸಿಸ್ ಸಂಸ್ಥೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಮತ್ತೆ ಕಂಪನಿಯನ್ನು ಯಶಸ್ವಿಯಾಗಿ ಮುನ್ನಡೆಸಬಲ್ಲ ನಾಯಕರಿಗಾಗಿ ಹುಡುಕಾಟ ಆರಂಭವಾಗಿದೆ.
ಮೂಲಗಳ ಪ್ರಕಾರ ಕಂಪನಿಯ ಸಂಸ್ಥಾಪಕರಲ್ಲಿ ಒಬ್ಬರಾದ ನಂದನ್ ನಿಲೇಕಣಿ ಅವರನ್ನು ಈ ಹುದ್ದೆ ಮತ್ತೆ ಹುಡುಕಿಬಂದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ. ಸಿಕ್ಕಾ ಆಯ್ಕೆ ಮೂಲಕ ಮೊದಲ ಬಾರಿಗೆ ಕಂಪನಿಗೆ ಸಂಸ್ಥಾಪಕೇತರರನ್ನು ನೇಮಿಸಲಾಗಿತ್ತು.
ಆದರೆ ಅವರ ಕಾರ್ಯಶೈಲಿ ಬಗ್ಗೆ ಇನ್ಫಿ ಸಂಸ್ಥಾಪಕ ಅಧ್ಯಕ್ಷ ಮೂರ್ತಿ ಹಲವು ಬಾರಿ ಬಹಿರಂಗವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ ಮತ್ತೆ ಸಂಸ್ಥಾಪಕ ಸದಸ್ಯರೇ ಕಂಪನಿಯ ಚುಕ್ಕಾಣಿ ಹಿಡಿಯಬಹುದು. ಹೀಗಾಗಿ ನಂದನ್ ನಿಲೇಕಣಿ ಹೆಚ್ಚು ಸೂಕ್ತ ಅಭ್ಯರ್ಥಿ ಎಂಬ ವಿಶ್ಲೇಷಣೆಕೇಳಿಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.