ಅಂಬಿ ಅಂತ್ಯಸಂಸ್ಕಾರ ಕಂಠೀರವದಲ್ಲಿ ಬೇಡ್ವಂತೆ: ಕೇಳಿ ಈ ವಕೀಲಪ್ಪನ ಅಂತೆ ಕಂತೆ!

By Web DeskFirst Published Nov 25, 2018, 2:38 PM IST
Highlights

ಈಗ ಬೇಕಿತ್ತಾ ಅಂಬಿ ಅಂತ್ಯಸಂಸ್ಕಾರ ವಿವಾದ?! ಅಂಬಿ ಅಂತ್ಯಸಂಸ್ಕಾರ ಕಂಠೀರವ ಸ್ಟುಡಿಯೋದಲ್ಲಿ ಮಾಡಲು ಅಪಸ್ವರ! ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರ ನಡೆಸಲು ವಕೀಲ ಆರ್‌ಎಲ್‌ಎನ್ ಮೂರ್ತಿ ಅಪಸ್ವರ! ರಾಜ್ಯಪಾಲರು, ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ನ್ಯಾಯಮೂರ್ತಿಗೆ ಪತ್ರ

ಬೆಂಗಳೂರು(ನ.25): ರೆಬಲ್ ಸ್ಟಾರ್, ಕಲಿಯುಗದ ಕರ್ಣ, ಮಂಡ್ಯದ ಗಂಡು ಅಂಬರೀಷ್ ಅಗಲಿಕೆಯ ನೋವಲ್ಲಿ ಇಡೀ ಕರ್ನಾಟಕ ಕಣ್ಣೀರಿಡುತ್ತಿದೆ. ಆದರೆ ಅಂಬರೀಷ್ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದಂತೆ ಹೊಸದೊಂದು ವಿವಾದ ಸೃಷ್ಟಿಯಾಗಿರುವುದು ನಿಜಕ್ಕೂ ದುರದೃಷ್ಟಕರ.

"

ಹೌದು, ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಅಂತ್ಯಸಂಸ್ಕಾರಕ್ಕೆ ಅವಕಾಶ ಕೊಡಬಾರದು ಎಂದು ಆರ್‌ಎಲ್‌ಎನ್ ಮೂರ್ತಿ ಎಂಬ ವಕೀಲರು ರಾಜ್ಯಪಾಲರು, ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ.

"

ಕಠೀರವ ಸ್ಟುಡಿಯೋ ಇರುವುದು ಕನ್ನಡ ಚಿತ್ರರಂಗದ ಅಭಿವೃದ್ಧಿಗಾಗಿಯೇ ಹೊರತು ನಟ, ನಟಿಯರ ಅಂತ್ಯಸಂಸ್ಕಾರಕ್ಕೆ ಅಲ್ಲ ಎಂಬುದು ಆರ್‌ಎಲ್‌ಎನ್ ಮೂರ್ತಿ ಅವರ ವಾದವಾಗಿದೆ.

ಈ ಕುರಿತು ಸುವರ್ಣನ್ಯೂಸ್ ಜೊತೆ ಮಾತನಾಡಿರುವ ಆರ್‌ಎಲ್‌ಎನ್ ಮೂರ್ತಿ, ಯಾವುದೇ ಕಾರಣಕ್ಕೂ ಕಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಕೊಡಬಾರದು ಎಂದು ಹೇಳಿದ್ದಾರೆ.

click me!