
ಕುಣಿಗಲ್: ವಿವಾಹ ವಿಚ್ಚೇದನ ಪ್ರಕರಣದಲ್ಲಿ ರಾಜಿ ಸಂಧಾನ ಮಾಡಿಸಿದ್ದಕ್ಕೆ ಕುಪಿತಗೊಂಡ ಕಕ್ಷಿದಾರ ವಕೀಲರನ್ನೇ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ನಲ್ಲಿ ಶನಿವಾರ ನಡೆದಿದೆ.
ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಲ್ಲಿ ವಕೀಲ ಹರ್ಷ ಅವರು ಚಾಕು ಇರಿತಕ್ಕೊಳಗಾಗಿ ಗಾಯಗೊಂಡಿದ್ದು, ಅವರನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಣಿಗಲ್ ತಾಲೂಕಿನ ಚೊಟ್ನಹಳ್ಳಿಯ ಬೈರೇಗೌಡ ಹಲ್ಲೆ ನಡೆಸಿದ ಆರೋಪಿ.
ಬೈರೇಗೌಡ, ಜಿನ್ನಾಗರೆ ಗ್ರಾಮದ ಮಹಿಳೆಯೊಬ್ಬರನ್ನು ವಿವಾಹವಾಗಿದ್ದ. ‘ಈತನಿಗೆ ಅಕ್ರಮ ಸಂಬಂಧ ಇದೆ’ ಎಂದು ಆರೋಪಿಸಿ ಮಹಿಳೆಯು ವಿವಾಹ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣವನ್ನು ವಕೀಲರಾದ ಹರ್ಷ ಮತ್ತು ಚಂದ್ರೇಗೌಡ ಅವರು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಮುಂದಾಗಿದ್ದರು.
ಶನಿವಾರ ವಕೀಲರನ್ನು ಭೇಟಿಯಾಗಲು ಬಂದ ಬೈರೇಗೌಡ, ಹರ್ಷ ಅವರ ಕೈ, ಎದೆ, ಬೆನ್ನಿಗೆ ಚಾಕುರಿದು ಗಾಯಗೊಳಿಸಿದ್ದಾನೆ. ಮತ್ತೊಬ್ಬ ವಕೀಲ ಚಂದ್ರೇಗೌಡ ಹಾಗೂ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.