ಕೇರಳ ಪ್ರವಾಹ: ಮೋದಿ ವೈಮಾನಿಕ ಸಮೀಕ್ಷೆ ಆರಂಭ

Published : Aug 18, 2018, 10:54 AM ISTUpdated : Sep 09, 2018, 09:33 PM IST
ಕೇರಳ ಪ್ರವಾಹ: ಮೋದಿ ವೈಮಾನಿಕ ಸಮೀಕ್ಷೆ ಆರಂಭ

ಸಾರಾಂಶ

ಕೇರಳದಲ್ಲಿ ಹಾನಿಗೊಳಗಾದ ಪ್ರದೇಶಗಳ ಪೈಕಿ ಎರ್ನಾಕುಲಂ, ತ್ರಿಶೂರ್ ಜಿಲ್ಲೆಗಳ ಕೆಲ ಭಾಗಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಹವಾಮಾನ ವೈಪರಿತ್ಯದಿಂದ ವೈಮಾನಿಕ ಸಮೀಕ್ಷೆ ನಡೆಸುವುದು ಸಾಧ್ಯವಿಲ್ಲ ಎನ್ನಲಾಗಿತ್ತು. ಆದರೆ ಉನ್ನತ ಮಟ್ಟದ ಸಭೆ ಬಳಿಕ ವೈಮಾನಿಕ ಸಮೀಕ್ಷೆ ನಡೆಸಲು ಪ್ರಧಾನಿ ಹಾಗೂ ಮುಖ್ಯಮಂತ್ರಿ ಮುಂದಾಗಿದ್ದಾರೆ. ರಕ್ಷಣ ಪಡೆಗಳು ಹಗಲಿರುಳೆನ್ನದೇ ಕಾರ್ಯಾಚರಣೆ ನಡೆಸಿ ಇದುವರೆಗೆ ಸುಮಾರು 82 ಸಾವಿರ ಜನರನ್ನು ರಕ್ಷಿಸಿದ್ದಾರೆ.

ತಿರುವನಂತಪುರಂ(ಆ.18): ಕೇರಳದಲ್ಲಿ ಕಳೆದ ಒಂಬತ್ತು ದಿನಗಳಿಂದ ಎಡಬಿಡದೇ ಸುರಿಯುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸಿದ ಬಳಿಕ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ.

ಕೇರಳದಲ್ಲಿ ಹಾನಿಗೊಳಗಾದ ಪ್ರದೇಶಗಳ ಪೈಕಿ ಎರ್ನಾಕುಲಂ, ತ್ರಿಶೂರ್ ಜಿಲ್ಲೆಗಳ ಕೆಲ ಭಾಗಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಹವಾಮಾನ ವೈಪರಿತ್ಯದಿಂದ ವೈಮಾನಿಕ ಸಮೀಕ್ಷೆ ನಡೆಸುವುದು ಸಾಧ್ಯವಿಲ್ಲ ಎನ್ನಲಾಗಿತ್ತು. ಆದರೆ ಉನ್ನತ ಮಟ್ಟದ ಸಭೆ ಬಳಿಕ ವೈಮಾನಿಕ ಸಮೀಕ್ಷೆ ನಡೆಸಲು ಪ್ರಧಾನಿ ಹಾಗೂ ಮುಖ್ಯಮಂತ್ರಿ ಮುಂದಾಗಿದ್ದಾರೆ.

ರಕ್ಷಣ ಪಡೆಗಳು ಹಗಲಿರುಳೆನ್ನದೇ ಕಾರ್ಯಾಚರಣೆ ನಡೆಸಿ ಇದುವರೆಗೆ ಸುಮಾರು 82 ಸಾವಿರ ಜನರನ್ನು ರಕ್ಷಿಸಿದ್ದಾರೆ. ಕೇರಳದಲ್ಲಿ 1924ರಲ್ಲೂ ಇದೇ ರೀತಿಯ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಕೇರಳದ 14 ಜಿಲ್ಲೆಗಳ ಜನ ವಸತಿ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ.  
 
     
    

PREV
click me!

Recommended Stories

ಥೈಲ್ಯಾಂಡ್‌ನಿಂದ ಚೀಲದಲ್ಲಿ 48 ವಿಷಕಾರಿ ಹಾವನ್ನು ತಂದ ಪ್ರಯಾಣಿಕ; ಇಲ್ಲಿವೆ ಫೋಟೋಗಳು
Bride Calls Off Wedding: ಮದುವೆ ಮಂಟಪದಲ್ಲೇ ವರನ ಅಸಲಿಯತ್ತು ಕಂಡುಹಿಡಿದ ವಧು! ಮದುವೆ ನಿಂತೋಯ್ತು!