23ರ ಬಳಿಕ ಹಾಲಿ ಸಚಿವರು ಮಾಜಿ! ಹೊಸ ಬಾಂಬ್ ಸಿಡಿಸಿದ ನಾಯಕ

Published : May 03, 2019, 07:56 AM IST
23ರ ಬಳಿಕ ಹಾಲಿ ಸಚಿವರು ಮಾಜಿ! ಹೊಸ ಬಾಂಬ್ ಸಿಡಿಸಿದ ನಾಯಕ

ಸಾರಾಂಶ

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿರುವ ಬೆನ್ನಲ್ಲೇ ನಾಯಕರೋರ್ವರು ಹೊಸ ಬಾಂಬ್ ಸಿಡಿಸಿದ್ದಾರೆ. ಏನದು?

ಗೋಕಾಕ :  ‘ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟ ನಂತರ ಹಾಲಿ ಸಚಿವರೆಲ್ಲ ಮಾಜಿಗಳಾಗಲಿದ್ದಾರೆ. ನಮಗೆ ದೊಡ್ಡ ಪ್ರಮಾಣದ ಅಧಿಕಾರ ಸಿಗಲಿದೆ’ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಪುತ್ರ ಅಮರನಾಥ ಜಾರಕಿಹೊಳಿ ಕೆಎಂಎಫ್‌ ನಿರ್ದೇಶಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಗುರುವಾರ ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸತ್ಕಾರ ಸಭೆಯಲ್ಲಿ ಮಾತನಾಡಿ, ಮೇ 23ರ ಬಳಿಕ ರಾಜ್ಯ ರಾಜಕೀಯದಲ್ಲಿ ಧ್ರುವೀಕರಣವಾಗಲಿದೆ. ರಾಜ್ಯ ಸರ್ಕಾರದಲ್ಲಿ ಸಾಕಷ್ಟುಬದಲಾವಣೆಗಳಾಗಲಿವೆ ಎಂದು ಭವಿಷ್ಯ ನುಡಿದರು.

ಸಹೋದರನ ವಿರುದ್ಧ ಕಿಡಿ: ಈಗ ಕಾರಿಗೆ ಕೆಂಪು ದೀಪ ಹಾಕಿಕೊಂಡು ಓಡಾಡುವರಿಗೆ ಹೆದರಬೇಡಿ, ಮುಂದಿನ ದಿನಗಳಲ್ಲಿ ನಮಗೆ ದೊಡ್ಡ ಅಧಿಕಾರ ಬರಲಿದೆ. ಅಧಿಕಾರ ಇರಲಿ, ಬಿಡಲಿ ನಮ್ಮನ್ನು ನಂಬಿ. ಸಮಯ ಸಾಧಕರನ್ನು, ವಿಶ್ವಾಸ ದ್ರೋಹ, ಬೆನ್ನಿಗೆ ಚೂರಿ ಹಾಕುವ ಮಂದಿಯನ್ನು ನಂಬಬೇಡಿ ಎಂದು ಪರೋಕ್ಷವಾಗಿ ಸಹೋದರ ಸತೀಶ್‌ ಜಾರಕಿಹೊಳಿ ವಿರುದ್ಧ ರಮೇಶ್‌ ವಾಗ್ದಾಳಿ ನಡೆಸಿದರು.

ಇದೇ ವೇಳೆ, ಬೆಂಗಳೂರು ಮಟ್ಟದಲ್ಲಿ ಮಗನನ್ನು ಬೆಳೆಸುವ ಆಸೆ ಇದೆ ಎಂದ ಅವರು, ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು. ಈ ಮೂಲಕ ಮುಂದಿನ ದಿನಗಳಲ್ಲಿ ತಮ್ಮ ಪುತ್ರನನ್ನು ಸಕ್ರಿಯ ರಾಜಕೀಯಕ್ಕೆ ಕರೆತರುವ ಸುಳಿವು ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್