64 ವರ್ಷಗಳ ಬಳಿಕ ಹೂತಿಟ್ಟ ಶವವನ್ನು ಹೊರತೆಗೆದು ಮುಸ್ಲಿಂ ಸಂಪ್ರದಾಯದಂತೆ ಅಂತ್ಯಕ್ರಿಯೆ!

Published : Oct 02, 2016, 04:05 AM ISTUpdated : Apr 11, 2018, 01:10 PM IST
64 ವರ್ಷಗಳ ಬಳಿಕ ಹೂತಿಟ್ಟ ಶವವನ್ನು ಹೊರತೆಗೆದು ಮುಸ್ಲಿಂ ಸಂಪ್ರದಾಯದಂತೆ ಅಂತ್ಯಕ್ರಿಯೆ!

ಸಾರಾಂಶ

ವಿಜಯಪುರ(ಅ.02): 64 ವರ್ಷಗಳ ಹಿಂದೆ ಅಂತ್ಯಕ್ರಿಯೆ ಮಾಡಿದ್ದ ವ್ಯಕ್ತಿ ಸಮಾಧಿಯಿಂದ ಶವವೊಂದನ್ನು ಹೊರತೆಗೆದು ಮತ್ತೆ ಮುಸ್ಲಿಂ ಧರ್ಮದಂತೆ ಅಂತ್ಯಕ್ರಿಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಮುದ್ದೇ ಬಿಹಾಳ ತಾಲೂಕಿನ ಹೊಕ್ರಾಣಿ ಎಂಬ ಗ್ರಾಮ ಇಂತದೊಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹೊಕ್ರಾಣಿ ಗ್ರಾಮದ ಹನುಮಂತ ಮುತ್ಯಾ ಕೊಂಗನೂರು ಎಂಬ ವ್ಯಕ್ತಿ ಹುಟ್ಟಾ ಹಿಂದು ಧರ್ಮದವನಾಗಿದ್ದರೂ ಮುಸ್ಲಿಂ ಧರ್ಮಿಯರಿಗಿಂತ ಹೆಚ್ಚಾಗಿ ಅಲ್ಹಾನನ್ನು ಪೂಜಿಸುತ್ತಿದ್ದ. ಅಲ್ಲದೇ ಪ್ರತಿ ವರ್ಷ ಮೊಹರಂ ಬಂತೆಂದರೆ ಸಾಕು ಹನುಮಂತನ ಮೈಯಲ್ಲಿ ಮುಸ್ಲಿಂ ದೇವರು ಬರುತ್ತಿದ್ದರಂತೆ. ಆತನ ನಿಧನದ ನಂತರ ಗ್ರಾಮದ ಜುಮ್ಮಣ್ಣ ಜುಗಲಿ ಎಂಬುವವರು ತಮ್ಮ ಹೊಲದಲ್ಲಿ ಹಿಂದೂ ಸಂಪ್ರದಾಯದಂತೆ ಆತನ ಅಂತ್ಯಕ್ರಿಯೆ ಮಾಡಿದ್ದರು.

ಆದರೆ, ಇತ್ತೀಚಿಗೆ ಗ್ರಾಮದ ಕೆಲವ್ರ ಮನಸ್ಸಿನಲ್ಲಿ ನಾನಿನ್ನೂ ಕುಳಿತಿದ್ದೇನೆ. ನನ್ನನ್ನು ಮಲಗಿಸಿ ಎಂದು ಹನುಮಂತ ಮುತ್ಯಾ ಬಂದು ಹೇಳಿದಂತಾಯಿತಂತೆ. ಹೀಗಾಗಿ ಗ್ರಾಮದ ಹಿರಿಯರು ಮುತ್ಯಾನ ಶವ ಹೊರ ತೆಗೆದು ಮುಸ್ಲಿಂ ಧಾರ್ಮಿಕ ವಿಧಿ-ವಿಧಾನದಂತೆ ಅಂತ್ಯಕ್ರಿಯೆ ನೆರವೇರಿಸಿ ಗೋರಿ ಕಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!