
ಹೊಸದಿಲ್ಲಿ (ನ.26): ಈಗಾಗಲೇ ಅನೇಕ ಪಾಕಿಸ್ತಾನದ ನಾಗರಿಕರಿಗೆ ಭಾರತದಲ್ಲಿ ಚಿಕಿತ್ಸೆ ಪಡೆಯಲು ವೈದ್ಯಕೀಯ ವೀಸಾ ಮಂಜೂರು ಮಾಡಿ ನೆರವು ನೀಡಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಇದೀಗ ಮತ್ತೆ ನಾಲ್ಕು ಮಂದಿಗೆ ಸಹಾಯದ ಭರವಸೆ ನೀಡಿದ್ದಾರೆ.
ಈ ಬಗ್ಗೆ ಸುಷ್ಮಾ ಅವರಿಗೆ ಪಾಕ್ ಬಾಲಕ ಶಹಬಾಜ್ ಇಕ್ಬಾಲ್ ಎಂಬಾತ, ಅಲ್ಲಾನನ್ನೂ ಬಿಟ್ಟರೆ ನೀವೇ ನಮ್ಮ ಭರವಸೆ ಎಂದು ಮನವಿ ಮಾಡಿಕೊಂಡಿದ್ದ. ಇದೀಗ ಬಾಲಕನ ಮನವಿಗೆ ಸ್ಪಂದಿಸಿದ ಸುಷ್ಮಾ ಅವರು, ತಮಗೆ ಭಾರತಕ್ಕೆ ಬಂದು ಚಿಕಿತ್ಸೆ ಪಡೆದುಕೊಳ್ಳಲು ವೈದ್ಯಕೀಯ ವೀಸಾ ಮಂಜೂರು ಮಾಡಲಾಗುವುದು. ಶೀಘ್ರದಲ್ಲೇ ವೀಸಾ ದೊರೆಯಲಿದೆ ಎಂದು ಟ್ವಿಟರ್'ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ಹಿಂದೆಯೂ ಕೂಡ ಅನೇಕ ಪಾಕ್ ನಾಗರಿಕರಿಗೆ ಭಾರತಕ್ಕೆ ಆಗಮಿಸಿ ಚಿಕಿತ್ಸೆ ಪಡೆದುಕೊಳ್ಳಲ ನೆರವು ನೀಡಿ ಸುಷ್ಮಾ ಸ್ವರಾಜ್ ಮಾನವೀಯತೆ ತೋರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.