ಬಂಡೀಪುರ ಬೆನ್ನಲ್ಲೇ ಸೊಳ್ಳೆಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

Published : Mar 14, 2019, 12:37 PM IST
ಬಂಡೀಪುರ ಬೆನ್ನಲ್ಲೇ ಸೊಳ್ಳೆಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

ಸಾರಾಂಶ

ಸೊಳ್ಳೆಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು| ಅರಣ್ಯಾಧಿಕಾರಿಗಳ ಸಕಾಲಿಕ ಕ್ರಮದಿಂದ ತಪ್ಪಿದ ಅನಾಹುತ

ನಾಪೋಕ್ಲು[ಮಾ.14]: ಮೈಸೂರು ಪ್ರಾದೇಶಿಕ ಅರಣ್ಯ ವ್ಯಾಪ್ತಿಯ ಸೊಳ್ಳೆಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಬುಧವಾರ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯಾಧಿಕಾರಿಗಳ ಸಕಾಲಿಕ ಕ್ರಮದಿಂದಾಗಿ ಎರಡನೇ ಬಾರಿಗೆ ಭಾರಿ ಅನಾಹುತ ತಪ್ಪಿದೆ.

ಪಕ್ಕದಲ್ಲೇ ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯವಿದ್ದು, ವನ್ಯಜೀವಿ ವಿಭಾಗದ ಸಿಬ್ಬಂದಿ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಇದರಿಂದ ಇತರೆಡೆ ಬೆಂಕಿ ಹರಡುವುದು ತಪ್ಪಿದೆ.ಸುಮಾರು 35ರಿಂದ 40 ಎಕರೆಯಷ್ಟುಮೀಸಲು ಅರಣ್ಯ ಬೆಂಕಿಗಾಹುತಿಯಾಗಿದೆ.

ಫೆ.23ರಂದು ಇದೇ ಮೀಸಲು ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು, ಪಕ್ಕದ ವೀರನಹೊಸಹಳ್ಳಿವಲಯಕ್ಕೂ ಹರಡಿ ಸುಮಾರು 50 ಎಕರೆಯಷ್ಟುಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿತ್ತು. ಇದಾದ 20 ದಿನದಲ್ಲೇ ಮತ್ತೆ ಬೆಂಕಿ ಬಿದ್ದಿದೆ.

ನಾಪೋಕ್ಲುವಿನಲ್ಲಿ ಕಾಡ್ಗಿಚ್ಚು:

ಕೊಡಗು ಜಿಲ್ಲೆಯ ಅತ್ಯಂತ ಎತ್ತರದ ಬೆಟ್ಟ, ಪ್ರವಾಸಿ ತಾಣವಾದ ಕಕ್ಕಬೆ ನಾಲಡಿ ವ್ಯಾಪ್ತಿಯ ತಡಿಯಂಡಮೋಳ್‌ ಬೆಟ್ಟದಲ್ಲಿ ಬುಧವಾರ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಟ್ಟದಲ್ಲಿ ಹುಲ್ಲು ಹೆಚ್ಚಾಗಿದ್ದು, ಬೇಸಿಗೆಯಾದ ಹುಲ್ಲು ಒಣಗಿದ್ದು ಬೆಂಕಿ ಸುಲಭವಾಗಿ ಎಲ್ಲೆಡೆ ವ್ಯಾಪಿಸುತ್ತಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ