ನಟ ಸೈಫ್ ಅಲಿ ಖಾನ್ ಗೆ ಎದುರಾಯ್ತು ಹೊಸ ಸಂಕಷ್ಟ

Published : Jun 09, 2018, 12:52 PM IST
ನಟ ಸೈಫ್ ಅಲಿ ಖಾನ್ ಗೆ ಎದುರಾಯ್ತು ಹೊಸ ಸಂಕಷ್ಟ

ಸಾರಾಂಶ

ಬಾಲಿವುಡ್ ನಟ ಸಲ್ಮಾನ್ ಖಾನ್ ಭಾಗಿಯಾಗಿದ್ದ ಕೃಷ್ಣ ಮೃಗ ಹತ್ಯೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ನ್ಯಾಯಾಲಯದಿಂದ ಕ್ಲೀನ್‌ಚಿಟ್ ಪಡೆದಿದ್ದ ನಟ ಸೈಫ್ ಅಲಿ ಖಾನ್‌ಗೆ ಇದೀಗ ಕಾಡುಹಂದಿ ಬೇಟೆ ಪ್ರಕರಣದ ಸಂಕಷ್ಟ ಎದುರಾಗಿದೆ. 

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಭಾಗಿಯಾಗಿದ್ದ ಕೃಷ್ಣ ಮೃಗ ಹತ್ಯೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ನ್ಯಾಯಾಲಯದಿಂದ ಕ್ಲೀನ್‌ಚಿಟ್ ಪಡೆದಿದ್ದ ನಟ ಸೈಫ್ ಅಲಿ ಖಾನ್‌ಗೆ ಇದೀಗ ಕಾಡುಹಂದಿ ಬೇಟೆ ಪ್ರಕರಣದ ಸಂಕಷ್ಟ ಎದುರಾಗಿದೆ. 

ಬಲ್ಗೇರಿಯಾದಲ್ಲಿ ಕಾನೂನು ಬಾಹಿರವಾಗಿ ಕಾಡು ಹಂದಿ ಬೇಟೆಯಾಡಿದ ಪ್ರಕರಣದಲ್ಲಿ ಇಂಟರ್‌ಪೋಲ್ ಸೂಚನೆ ಅನ್ವಯ, ಮುಂಬೈ ಪೊಲೀಸರು ನಟ ಸೈಫ್ ಅಲಿ ಖಾನ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ಸಾಕ್ಷಿ ರೂಪದಲ್ಲಿ ಸೈಫ್‌ರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. 

ಬಲ್ಗೇರಿಯಾದಲ್ಲಿ ಹಂದಿ ಬೇಟೆಗೆ ಸರ್ಕಾರವೇ ಅನುಮತಿ ಕೊಡುತ್ತದೆ. ಸೈಫ್ ಕೂಡಾ ಬಲ್ಗೇರಿಯಾಕ್ಕೆ ತೆರಳಿದಾಗ ಹಂದಿ  ಬೇಟೆಯಾಡಿದ್ದರು. ಅದರೆ ಈ ಸಂಬಂಧ ಸೈಫ್‌ಗೆ ನೆರವಾಗಿದ್ದ ಏಜೆಂಟ್, ಅಧಿಕೃತ ಪರವಾನಗಿ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬಲ್ಗೇರಿಯಾ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನ್ಯಾ। ಸ್ವಾಮಿನಾಥನ್‌ ವಾಗ್ದಂಡನೆಗೆ 56 ನಿವೃತ್ತ ಜಡ್ಜ್‌ಗಳ ಕಿಡಿ
ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲದಿದ್ದರೆ 3ನೇ ವಿಶ್ವಯುದ್ಧ : ಟ್ರಂಪ್‌ ಎಚ್ಚರಿಕೆ