ಯೋಧ ಬಿಚ್ಚಿಟ್ಟ ಕರಾಳ ಸತ್ಯ: ವಿಡಿಯೋ ಬಗ್ಗೆ ವರದಿ ಕೇಳಿದ ಗೃಹ ಸಚಿವ ರಾಜನಾಥ್ ಸಿಂಗ್

Published : Jan 10, 2017, 12:21 AM ISTUpdated : Apr 11, 2018, 12:44 PM IST
ಯೋಧ ಬಿಚ್ಚಿಟ್ಟ ಕರಾಳ ಸತ್ಯ: ವಿಡಿಯೋ ಬಗ್ಗೆ ವರದಿ ಕೇಳಿದ ಗೃಹ ಸಚಿವ ರಾಜನಾಥ್ ಸಿಂಗ್

ಸಾರಾಂಶ

ಯೋಧರಿಗೆ ನೀಡುವ ಆಹಾರ ಹಾಗೂ ಅಲ್ಲಿನ ವ್ಯವಸ್ಥೆಯ BSF ಯೋಧನೊಬ್ಬ ಅಸಮಾಧಾನ ವ್ಯಕ್ತಪಡಿಸಿ ನಿನ್ನೆಯಷ್ಟೇ ತಮ್ಮ ಫೇಸ್'ಬುಕ್'ನಲ್ಲಿ ವಿಡಿಯೋಗಳನ್ನು ಹಾಕಿದ್ದರು. ಇವರು ಹಾಕಿದ ಈ ವಿಡಿಯೋಗಳು ವೈರಲ್ ಆಗಿ ದೇಶದಾದ್ಯಂತ ಚರ್ಚೆಗೀಡಾಗಿದ್ದವು ಹಾಗೂ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಠೀಕೆಗಳು ಕೇಳಿ ಬಂದಿದ್ದವು. ಇವೆಲ್ಲಾ ಬೆಳವಣಿಗೆಗಳ ಬಳಿಕ ಸರ್ಕಾರ ಈಗ ಈ ಪ್ರಕರಣದ ತನಿಖೆ ನಡೆಸಲು ಸೂಚಿಸಿದೆ.

ನವದೆಹಲಿ(ಜ.10): ಯೋಧರಿಗೆ ನೀಡುವ ಆಹಾರ ಹಾಗೂ ಅಲ್ಲಿನ ವ್ಯವಸ್ಥೆಯ BSF ಯೋಧನೊಬ್ಬ ಅಸಮಾಧಾನ ವ್ಯಕ್ತಪಡಿಸಿ ನಿನ್ನೆಯಷ್ಟೇ ತಮ್ಮ ಫೇಸ್'ಬುಕ್'ನಲ್ಲಿ ವಿಡಿಯೋಗಳನ್ನು ಹಾಕಿದ್ದರು. ಇವರು ಹಾಕಿದ ಈ ವಿಡಿಯೋಗಳು ವೈರಲ್ ಆಗಿ ದೇಶದಾದ್ಯಂತ ಚರ್ಚೆಗೀಡಾಗಿದ್ದವು ಹಾಗೂ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಠೀಕೆಗಳು ಕೇಳಿ ಬಂದಿದ್ದವು. ಇವೆಲ್ಲಾ ಬೆಳವಣಿಗೆಗಳ ಬಳಿಕ ಸರ್ಕಾರ ಈಗ ಈ ಪ್ರಕರಣದ ತನಿಖೆ ನಡೆಸಲು ಸೂಚಿಸಿದೆ.

ನಿನ್ನೆಯಷ್ಟೇ BSF 29ನೇ ಬೆಟಾಲಿಯನ್'ನ ಯೋಧ ತೇಜ್ ಬಹದ್ದೂರ್ ಯಾದವ್ ಸೈನಿಕರಿಗೆ ಅಧಿಕಾರಿಗಳು ಪೂರೈಸುತ್ತಿರುವ ಆಹಾರದ ಕುರಿತಾಗಿ ವಿಡಿಯೋಗಳನ್ನು ತಮ್ಮ ಫೇಸ್ಬುಕ್'ನಲ್ಲಿ ಹಾಕಿಕೊಂಡಿದ್ದರು. ಇದರೊಂದಿಗೆ ಸರ್ಕಾರ ದವಸ ಧಾನ್ಯಗಳನ್ನು ನೀಡುತ್ತಿದ್ದರೂ ಇದು ನಮಗೆ ತಲುಪುತ್ತಿಲ್ಲ ಎಂದು ಹಿರಿಯ ಅಧಿಕಾರಿಗಳು ನಡೆಸುತ್ತಿರುವ ಭ್ರಷ್ಟಾಚಾರ ವಿಚಾರವನ್ನು ಹೊರ ಹಾಕಿದ್ದರು. ಅಲ್ಲದೆ ಈ ವಿಒಡಿಯೋ ಹಾಕಿದ ಬಳಿಕ ನಾನು ಬದುಕುತ್ತೀನೋ ಇಲ್ಲವೋ ಗೊತ್ತಿಲ್ಲ ಆದರೆ ಈ ವಿಚಾರ ಮಾಧ್ಯಮ ಹಾಗೂ ಸರ್ಕಾರದ ಗಮನಕ್ಕೆ ಬರುವಂತೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು.

ಈ ವಿಡಿಯೋಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಹಿರಿಯ ಅಧಿಕಾರಿಗಳು ಹಾಗೂ ಸರ್ಕಾರವನ್ನು ಜನರು ಠೀಕಿಸುವುದರೊಂದಿಗೆ ಈ ಕುರಿತಾಗಿ ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.

ಈ ವಿಚಾರದ ಕುರಿತಾಗಿ ಪ್ರತಿಕ್ರಿಯಿಸಿದ ಗಡಿ ರಕ್ಷಣಾ ಪಡೆ, ಸೇನಾಪಡೆಯ ಹಿತಕ್ಕಾಗಿ ಬಿಎಸ್‍ಎಫ್  ಹೆಚ್ಚಿನ ಒತ್ತು ನೀಡುತ್ತದೆ ಎಂದು ಹೇಳಿಕೆ ನೀಡಿದೆ. ಆದಾಗ್ಯೂ, ಯೋಧರಿಗೆ ಏನಾದರೂ ಸಮಸ್ಯೆಗಳಿದ್ದರೆ ಆ ಬಗ್ಗೆ ತನಿಖೆ ನಡೆಸಲಾಗುವುದು. ಈಗಾಗಲೇ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳು ತೇಜ್ ಅವರು ಕರ್ತವ್ಯ ನಿರ್ವಹಿಸುತ್ತಿರುವ ಪ್ರದೇಶಕ್ಕೆ ದೌಡಾಯಿಸಿದ್ದಾರೆ ಎಂದು ಪ್ರತಿಕ್ರಿಯಿಸಿದೆ.

ಇನ್ನು ಈ ವಿಡಿಯೋ ಕೇಂದ್ರ ಗೃಹ ಸಚಿವ ರಜನಾಥ್ ಸಿಂಗ್'ರವರ ಗಮನಕ್ಕೆ ಬಂದಿದೆ. ಅಲ್ಲದೆ ಈ ಕುರಿತಾಗಿ ಹೆಚ್ಚಿನ ವರದಿಯನ್ನು ಕೇಳಿರುವ ಸಚಿವರು ಯೋಧರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಕ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಗೆ ಸೂಚನೆಯನ್ನೂ ನೀಡಿದ್ದಾರೆ.

ತನ್ನ ವಿಡಿಯೋವನ್ನು ನೋಡಿ ಪ್ರತಿಕ್ರಿಸಿರುವ ಕೇಂದ್ರ ಗೃಹಸಚಿವರಿಗೆ ಈ ಯೋಧ ಧನ್ಯವಾದ ತಿಉಳಿಸಿ.

ಇದನ್ನೂ ಓದಿ:

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ