
ಬೆಂಗಳೂರು[ಜು.04]: ಎರಡು ದಿನಗಳ ಹಿಂದಷ್ಟೆ ಸಚಿವ ಜಮೀರ್ ಅಹಮದ್ ಖಾನ್ ಮಾಜಿ ಸಿಎಂ ಸಿದ್ದರಾಮಯ್ಯ ಬಳಸುತ್ತಿದ್ದ ಫಾರ್ಚೂನರ್ ಕಾರನ್ನು ಪಟ್ಟು ಹಿಡಿದು ಪಡೆದುಕೊಂಡಿದ್ದರು.
ಈಗ ಮತ್ತೊಂದು ಬೇಡಿಕೆ ಈಡೇರಿಕೆಗೆ ಜಮೀರ್ ಜಟಾಪಟಿಗೆ ಇಳಿದಿದ್ದಾರೆ. ಮಾಜಿ ಸಚಿವ ತನ್ವೀರ್ ಸೇಠ್ ವಾಸವಿದ್ದ ನಿವಾಸಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.
ಈಗಾಗಲೇ ಜಯಮಹಲ್ ನಲ್ಲಿ ಜಮೀರ್ ಅವರಿಗೆ ನಿವೇಶನ ನೀಡಲಾಗಿದೆ. ಇದು ಬೇಡವೆಂದಿರುವ ಸಚಿವರು ಸ್ಯಾಂಕಿ ರಸ್ತೆಯಲ್ಲಿರುವ ನಂಬರ್ 30 ನಿವಾಸವನ್ನು ತಮಗೆ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸ್ಯಾಂಕಿ ರಸ್ತೆಯಲ್ಲಿರುವ ನಂಬರ್ 30 ನಿವಾಸವನ್ನು ಮತ್ತೊಬ್ಬ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಹಂಚಿಕೆ ಮಾಡಲಾಗಿದೆ. ಡಿಪಿಎಆರ್ ಮೂಲಕ ಆ ಮನೆಯನ್ನು ಪಡೆಯಲು ಜಮೀರ್ ಪ್ರಯತ್ನ ಮುಂದುವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.