ದ್ರೋಣನ ಸಾವಿನ ಬೆನ್ನಲ್ಲೇ ಮತ್ತೊಂದು ಆನೆ ಸಾವು

Published : Apr 28, 2019, 12:16 PM IST
ದ್ರೋಣನ ಸಾವಿನ ಬೆನ್ನಲ್ಲೇ ಮತ್ತೊಂದು ಆನೆ ಸಾವು

ಸಾರಾಂಶ

ದ್ರೋಣನ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್| ಅರಣ್ಯ ಇಲಾಖೆ ಕಾಟಚಾರದ ಚಿಕಿತ್ಸೆಗೆ ಮತ್ತೊಂದು ಕಾಡಾನೆ ಸಾವು!| ಮೈಸೂರಿನ ಆನೆ ಚೌಕೂರು ಅರಣ್ಯ ವ್ಯಾಪ್ತಿಯಲ್ಲಿ ಸಾವು| ನಿತ್ರಾಣಗೊಂಡು ಸಾವನ್ನೊಪ್ಪಿರುವುದಾಗಿ ಅರಣ್ಯ ಇಲಾಖೆ‌ ಸ್ಪಷ್ಟನೆ

ಮೈಸೂರು[ಏ.28]: ದ್ರೋಣನ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್ ಬಂದೆರಗಿದೆ. ಅರಣ್ಯ ಇಲಾಖೆ ಕಾಟಚಾರದ ಚಿಕಿತ್ಸೆಗೆ ಮತ್ತೊಂದು ಕಾಡಾನೆ ಸಾವನ್ನಪ್ಪಿದೆ. 

ಮೈಸೂರಿನ 45 ವರ್ಷದ ಹೆಣ್ಣಾನೆ ಚೌಕೂರು ಅರಣ್ಯ ವ್ಯಾಪ್ತಿಯಲ್ಲಿ ಸಾವನ್ನಪ್ಪಿದೆ. ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಚಿಕಿತ್ಸೆ ನೀಡಿದ್ದಾರೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಅರಣ್ಯಾಧಿಕಾರಿಗಳು ಕಾಡಾನೆ ನಿತ್ರಾಣಗೊಂಡು ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. 

ಮೈಸೂರು ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತ ದ್ರೋಣ ಇನ್ನಿಲ್ಲ

ಆದರೆ ಸ್ಥಳೀಯರು, ಪ್ರಾಣಿಪ್ರಿಯರಿಂದ ಈ ವಿಚಾರವಾಗಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳು ಆನೆಗೆ ಸರಿಯಾದ ಚಿಕಿತ್ಸೆ ನೀಡಿಲ್ಲ, ಅಲ್ಲದೇ ದ್ರೋಣ ಆನೆ ಸಾವಿನಲ್ಲೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ದ್ರೋಣನ ಸಾವಿನ ಘಟನೆ ಮಾಸುವ ಮುನ್ನವೇ ಮತ್ತೊಂದು ಕಾಡಾನೆ ಸಾವಮನ್ನಪ್ಪಿರುವುದು ದುರಂತವೇ ಸರಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಳೆ ಅರ್ಧ ಬೆಂಗಳೂರಿಗೆ ನೀರು ಪೂರೈಕೆ ಸ್ಥಗಿತ: ಕಾವೇರಿ 5ನೇ ಹಂತದ ಪೈಪ್‌ಲೈನ್‌ನಲ್ಲಿ ಸೋರಿಕೆ!
ಚಿನ್ನದ ಬೆಲೆ ಲಕ್ಷ ದಾಟಿದ ಬೆನ್ನಲ್ಲೇ ಕರ್ನಾಟಕದ ಈ ಜಿಲ್ಲೆಗೆ ಜಾಕ್‌ಪಾಟ್‌, ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆ!