
ನವದೆಹಲಿ (ಡಿ.03): ಮೋದಿಯವರ ನೋಟು ಅಮಾನ್ಯ ಕ್ರಮವನ್ನು ಶ್ಲಾಘಿಸುತ್ತಾ, ಇದೇ ರೀತಿ ದೇಶಾದ್ಯಂತ ಮದ್ಯವನ್ನು ಕೂಡಾ ನಿಷೇಧಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಮದ್ಯ ಉದ್ಯಮದಲ್ಲಿ ಅತೀ ಹೆಚ್ಚು ಭ್ರಷ್ಟಾಚಾರ ನಡೆಯುತ್ತದೆ. ಒಮ್ಮೆ ಮದ್ಯ ನಿಷೇಧ ಮಾಡಿದರೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿದಂತೆ. ಕಪ್ಪುಹಣ ಸಂಗ್ರಹಕ್ಕೆ ಕಡಿವಾಣ ಹಾಕಿದಂತೆ. ಹಾಗಾಗಿ ಮದ್ಯ
ನಿಷೇಧಕ್ಕೆ ಇದು ಸೂಕ್ತ ಸಮಯ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಪ್ರಧಾನಿಯವರ ತವರು ಗುಜರಾತ್ ಹಾಗೂ ಬಿಹಾರದಲ್ಲಿ ಮದ್ಯ ನಿಷೇಧವಿದೆ. ಇಲ್ಲಿಯ ಮನೆಗಳನ್ನು ಸಂತೋಷ ಮನೆಮಾಡಿದೆ. ಇದೊಂದು ಉತ್ತಮ ಕ್ರಮ ಎಂದು ಮೋದಿಯವರಿಗೆ ಗೊತ್ತಿದೆ. ಮಹಾತ್ಮ ಗಾಂಧಿ ಸಹ
ಮದ್ಯ ಮುಕ್ತ ಸಮಾಜವನ್ನು ಬಯಸಿದ್ದರು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.