ಕುಮಾರಣ್ಣ ಆಯ್ತು ಈಗ ಗ್ರಾಮ ವಾಸ್ತವ್ಯಕ್ಕೆ ಪರಂ, ರೇವಣ್ಣ ರೆಡಿ!

Published : Jun 25, 2019, 08:18 AM ISTUpdated : Jun 25, 2019, 08:20 AM IST
ಕುಮಾರಣ್ಣ ಆಯ್ತು ಈಗ ಗ್ರಾಮ ವಾಸ್ತವ್ಯಕ್ಕೆ ಪರಂ, ರೇವಣ್ಣ ರೆಡಿ!

ಸಾರಾಂಶ

ಕುಮಾರಣ್ಣ ಆಯ್ತು; ಇದೀಗ ರೇವಣ್ಣ, ಪರಂ ಗ್ರಾಮ ವಾಸ್ತವ್ಯ| ಬೇಲೂರಿನಿಂದ ಗ್ರಾಮ ವಾಸ್ತವ್ಯ ಆರಂಭಿಸಲು ಚಿಂತನೆ: ರೇವಣ್ಣ| ಎಲ್ಲಿಂದ, ಯಾವಾಗ ಎಂಬುದನ್ನು ಇನ್ನು ನಿರ್ಧರಿಸಿಲ್ಲ: ಪರಂ

ಮೈಸೂರು[ಜೂ.25]: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಖುದ್ದಾಗಿ ಅರಿತು, ಪರಿಹಾರ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಆರಂಭಿಸಿರುವ ಬೆನ್ನಲ್ಲೇ, ತಾವು ಸಹ ಗ್ರಾಮವಾಸ ಮಾಡುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹಾಗೂ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಸೋಮವಾರ ಘೋಷಿಸಿದ್ದಾರೆ.

ಬೇಲೂರಿನಿಂದ ತಮ್ಮ ಗ್ರಾಮವಾಸ್ತವ್ಯ ಆರಂಭಿಸುವ ಚಿಂತನೆಯಿದೆ ಎಂದು ರೇವಣ್ಣ ಹೇಳಿದರೆ, ಯಾವಾಗ ಮತ್ತು ಎಲ್ಲಿಂದ ಎಂಬುದರ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪರಮೇಶ್ವರ್‌ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಚರ್ಚಿಸಿ ಗ್ರಾಮ ವಾಸ್ತವ್ಯದ ರೂಪುರೇಷೆಗಳನ್ನು ರೂಪಿಸಿ ನಂತರ ಗ್ರಾಮ ವಾಸ್ತವ್ಯ ಆರಂಭಿಸಲಾಗುವುದು. ಗ್ರಾಮ ವಾಸ್ತವ್ಯವನ್ನು ಬೇಲೂರಿನಿಂದ ಆರಂಭಿಸುವ ಚಿಂತನೆಯಿದೆ ಎಂದು ತಿಳಿಸಿದ್ದಾರೆ.

ಇನ್ನೂ ಮೈಸೂರಿನಲ್ಲಿ ಮಾತನಾಡಿದ ಪರಮೇಶ್ವರ್‌, ನಾನೂ ಕೂಡ ಗ್ರಾಮ ವಾಸ್ತವ್ಯ ಮಾಡಲು ನಿರ್ಧರಿಸಿದ್ದೇನೆ. ಈ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇನೆ. ಯಾವಾಗ ಮತ್ತು ಎಲ್ಲಿಂದ ಎಂಬುದನ್ನು ಇನ್ನೂ ತೀರ್ಮಾನಿಸಬೇಕಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ