ಪೊಲೀಸ್ ಅಧಿಕಾರಿಗಳ ಬಳಿಕ ಐಏಎಸ್ ಅಧಿಕಾರಿಗೆ ಕಡ್ಡಾಯ ನಿವೃತ್ತಿ

Published : Jan 18, 2017, 04:51 PM ISTUpdated : Apr 11, 2018, 01:01 PM IST
ಪೊಲೀಸ್ ಅಧಿಕಾರಿಗಳ ಬಳಿಕ ಐಏಎಸ್ ಅಧಿಕಾರಿಗೆ ಕಡ್ಡಾಯ ನಿವೃತ್ತಿ

ಸಾರಾಂಶ

1991 ಬ್ಯಾಚ್’ನ ಹಿರಿಯ ಐಏಎಸ್ ಅಧಿಕಾರಿ ಕೆ. ನರಸಿಂಹ ಅವರನ್ನು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಕಡ್ಡಾಯ ನಿವೃತ್ತಿಗೊಳಪಡಿಸಲಾಗಿದೆ.

ನವದೆಹಲಿ (ಜ.18): ನಿನ್ನೆಯಷ್ಟೇ ಸರಿಯಾಗಿ ಕಾರ್ಯನಿರ್ವಹಿಸದ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಮನೆಗೆ ಕಳುಹಿಸಿದ ಕೇಂದ್ರ ಸರ್ಕಾರ ಇಂದು ಐಏಎಸ್ ಅಧಿಕಾರಿಯೊಬ್ಬರನ್ನು ಕಡ್ಡಾಯ ನಿವೃತ್ತಿಗೊಳಪಡಿಸಿದೆ.

1991 ಬ್ಯಾಚ್’ನ ಹಿರಿಯ ಐಏಎಸ್ ಅಧಿಕಾರಿ ಕೆ. ನರಸಿಂಹ ಅವರನ್ನು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಕಡ್ಡಾಯ ನಿವೃತ್ತಿಗೊಳಪಡಿಸಲಾಗಿದೆ.

ಸಮರ್ಥವಾಗಿ ಕಾರ್ಯ ನಿರ್ವಹಿಸದ ಜತೆಗೆ ನರಸಿಂಹ ಅವರ ಮೇಲೆ ಭ್ರಷ್ಟಾಚಾರದ ಆರೋಪವು ಇತ್ತು ಎಂದು ವರದಿಯಾಗಿದೆ.

ಪ್ರಧಾನಿ ಮೋದಿ ನೇತೃತ್ವದ ನೇಮಕಾತಿ ಸಮಿತಿಯು ನರಸಿಂಹ ಅವರ ಕಡ್ಡಾಯ ನಿವೃತ್ತಿಗೆ ಅನುಮೋದನೆ ನೀಡಿದೆ ಎನ್ನಲಾಗಿದೆ.

ಕೇಂದ್ರ ಸರ್ಕಾರದ ಸೇವೆಯಲ್ಲಿರುವ ಅಧಿಕಾರಿಗಳ ಕಾರ್ಯದಕ್ಷತೆಯ ಅವಲೋಕನ ನಡೆಯುತ್ತಿದೆ. ರಾಜ್ಯ ಸರ್ಕಾರಗಳು ಕೂಡಾ ಈ ಪ್ರಕ್ರಿಯೆಯನ್ನು ನಡೆಸಬೇಕೆಂದು ಕೇಂದ್ರ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೆರೆಮರೆಯ ಗುರು: ವಾರ್ಷಿಕೋತ್ಸವದ ವೇಳೆ ಮಕ್ಕಳು ಡಾನ್ಸ್ ಸ್ಟೆಪ್ ತಪ್ಪಿಸಬಾರದು ಎಂದು ಟೀಚರ್‌ ಏನ್ ಮಾಡಿದ್ರು ನೋಡಿ
Bengaluru: 70 ವರ್ಷದ ಪತಿಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ 67 ವರ್ಷದ ನಿವೃತ್ತ ಪ್ರಾಧ್ಯಾಪಕಿ!