ರಾಜಕಾರಣದಲ್ಲಿ ಈಗ ರಮೇಶ್ ಒಬ್ಬಂಟಿ! ಸತೀಶ್‌ಗೆ ಜೈ ಅಂದ ಶಾಸಕರು

Published : Dec 27, 2018, 03:59 PM ISTUpdated : Dec 27, 2018, 04:09 PM IST
ರಾಜಕಾರಣದಲ್ಲಿ ಈಗ ರಮೇಶ್ ಒಬ್ಬಂಟಿ! ಸತೀಶ್‌ಗೆ ಜೈ ಅಂದ ಶಾಸಕರು

ಸಾರಾಂಶ

ಸಚಿವ ಸಂಪುಟ ವಿಸ್ತರಣೆ ಆಗಿ ಹೋಗಿದೆ. ಬಂಡಾಯದ ಪ್ರಮುಖ ಎಂದೇ ಗುರುತಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ ಅವರನ್ನು ಉಳಿದ ಅತೃಪ್ತ ಶಾಸಕರು ಅರ್ಧದಲ್ಲಿ ಕೈಬಿಟ್ಟರಾ ಎಂಬ ಪ್ರಶ್ನೆ ಮೂಡಿದೆ.

ಚಿಕ್ಕೋಡಿ(ಡಿ.27)   ರಮೇಶ್ ಜಾರಕಿಹೊಳಿ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾವೆಲ್ಲರೂ ಬದ್ಧ ಎಂದೇ ಅತೃಪ್ತ ಶಾಸಕರು ಹೇಳಿಕೊಂಡು ಬಂದಿದ್ದರು. ಸಚಿವ ಸಂಪುಟ ವಿಸ್ತರಣೆಯಾದ ನಂತರ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮಾತನ್ನು ಆಡಿದ್ದರು

ರಮೇಶ್ ಬದಲು ಸತೀಶ್ ಜಾರಕಿಹೊಳಿಗೆ ಸಂಪುಟ ಮಣೆ ಹಾಕಿತ್ತು. ಇದಾದ ಕೆಲವೆ ದಿನದಲ್ಲೇ  ಅತೃಪ್ತ ಶಾಸಕರು ಅಣ್ಣ ರಮೇಶ್ ಬಿಟ್ಟು ಸತೀಶ್ ಹಿಂದೆ ಬಿದ್ದಿದ್ದಾರೆ. ಹಾಗಾಗಿ ರಮೇಶ್ ಇದೀಗ ಏಕಾಂಗಿಯಾಗಿದ್ದಾರೆ.

ಸಚಿವ ಸಂಪುಟ ಸೀಕ್ರೆಟ್: ವಿಲನ್ ಯಾರು? ಹೀರೋ ಯಾರು? ಇಲ್ಲಿದೆ ಅಸಲಿ ಕಥೆ

ರಮೇಶ್ ಜಾರಕಿಹೋಳಿ ಬೆಂಬಲಕ್ಕೆ ನಿಂತ ಶಾಸಕರ ಮನ ಒಲಿಸುವಲ್ಲಿ  ಸತೀಶ್ ಜಾರಕಿಹೋಳಿ ಯಶಸ್ವಿಯಾಗಿದ್ದಾರೆ. ರಮೇಶ್ ಬೆಂಬಲಿತ ಇಬ್ಬರು ಶಾಸಕರನ್ನು ಅಥಣಿಯಲ್ಲಿ ಭೇಟಿಯಾದ ಸತೀಶ್ ಮಾತುಕತೆ ನಡೆಸಿದ್ದಾರೆ. ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಹಾಗೂ ಅಥಣಿ ಶಾಸಕ ಮಹೇಶ್ ಕಮಟೊಳ್ಳಿ ಭೇಟಿಯಾಗಿ ಒಂದು ಗಂಟೆಗೂ ಹೆಚ್ಚ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.

ಆಪರೇಶನ್ ಕಮಲಕ್ಕೆ ಬ್ರೇಕ್ ಬೀಳುತ್ತಾ? ರಮೇಶ್ ಜಾರಕಿಹೊಳಿ ಅವರನ್ನೇ ಇಟ್ಟುಕೊಂಡು ಆಪರೇಶನ್ ಕಮಲ ನಡೆಸಿ ದೋಸ್ತಿ ಸರ್ಕಾರಕ್ಕೆ ಶಾಕ್ ನೀಡಬೇಕು ಎಂದು ಬಿಜೆಪಿ ಲೆಕ್ಕಾಚಾರ ಹಾಕಿತ್ತು. ಆದರೆ ಇದೀಗ ರಮೇಶ್ ಬೆಂಬಲಿಗರು ನಿಧಾನಕ್ಕೆ ದೋಸ್ತಿ ಸರಕಾರದ ಕಡೆ ವಾಲಿರುವುದಕ್ಕೆ ಬಿಜೆಪಿ ಆಪರೇಶನ್ ಆಸೆಯನ್ನು ಸದ್ಯಕ್ಕೆ ಅನಿವಾರ್ಯವಾಗಿ ಮುಂದಕ್ಕೆ ಹಾಕಬೇಕಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ