
ಕೋಹಿಮಾ(ಆ.31): ಕೇರಳ ಮತ್ತು ಕೊಡಗಿನ ಬೀಕರ ಜಲಪ್ರಾಳಯದ ಬಳಿಕ ಈ ಸ್ಥಿತಿ ಎದುರಿಸುವ ಮುಂದಿನ ನಗರ ಯಾವುದಪ್ಪಾ ಎಂದು ಎಲ್ಲರೂ ತಲೆ ಕೆಡಿಸಿಕೊಂಡು ಕೂತಿದ್ದಾರೆ. ಭೀಕರ ಮಳೆಗೆ ನಮ್ಮೂರೇನಾದ್ರೂ ನಲುಗುತ್ತಾ ಎಂಬುದೇ ಎಲ್ಲರ ಮುಂದಿರುವ ಮುಲಿಯನ್ ಡಾಲರ್ ಪ್ರಶ್ನೆ.
ಅದರಂತೆ ಈಶಾನ್ಯ ಭಾರತದ ಗಡಿ ರಾಜ್ಯ ನಾಗಾಲ್ಯಾಂಡ್ ನಲ್ಲಿ ಇದೀಗ ಮಳೆಯ ರುದ್ರ ನರ್ತನ ಪ್ರಾರಂಭವಾಗಿದೆ. ನಾಗಾಲ್ಯಾಂಡ್ ರಾಜ್ಯಾದ್ಯಂತ ಭೀಕರ ಮಳೆ, ಭೂಕುಸಿತ ಪ್ರಾರಂಭವಾಗಿದ್ದು, ಈಗಾಗಲೇ 12 ಜನರನ್ನು ಬಲಿ ಪಡೆದಿದೆ.
ಈ ಕುರಿತು ಟ್ವೀಟ್ ಮಾಡಿರುವ ನಾಗಾಲ್ಯಾಂಡ್ ಸಿಎಂ ನೈಫ್ಯೂ ರಿಯೋ, ರಾಜ್ಯ ಇದೀಗ ಸಹಾಯದ ನಿರೀಕ್ಷೆಯಲ್ಲಿದೆ ಎಂದು ತಿಳಿಸಿದ್ದಾರೆ. ಭೀಕರ ಮಳೆಗೆ ಈಗಾಗಲೇ ಸುಮಾರು 3 ಸಾವಿರ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಇನ್ನು ಸಿಎಂ ರಿಯೋ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥರ್ಥ ಸಿಂಗ್, ಈ ಕೂಡಲೇ ಎನ್ ಡಿಆರ್ ಎಫ್ ತಂಡವನ್ನು ರಾಜ್ಯಕ್ಕೆ ಕಳುಹಿಸುತ್ತಿದ್ದು, ರಾಜ್ಯದ ಜನ ಭಯಪಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.