
ಚೆನ್ನೈ(ಫೆ.20): ಮಲಯಾಳದ ಖ್ಯಾತ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ, ತಮಿಳು ನಟಿ ವರಲಕ್ಷ್ಮಿ ಶರತ್ಕುಮಾರ್, ತಮಗೂ ಕಿರುಕುಳ ನೀಡಲಾಗಿತ್ತು ಎಂದು ಹೇಳಿಕೊಂಡಿದ್ದಾರೆ.
ಮಹಿಳಾ ಸುರಕ್ಷೆ ಎನ್ನುವುದು ಹಾಸ್ಯದ ವಿಷಯವಾಗಿದೆ. ಕೊಚ್ಚಿಯಲ್ಲಿ ಇತರ ನಟಿಯರಂತೆ ನಾನು ಕೂಡ ಕಿರುಕುಳಕ್ಕೆ ಒಳಗಾಗಿದ್ದೆ. ಪ್ರಮುಖ ಟೀವಿ ಚಾನಲ್ವೊಂದರ ಪ್ರೋಗ್ರಾಮ್ ಮುಖ್ಯಸ್ಥರೊಬ್ಬರನ್ನು ನಾನು ಭೇಟಿಯಾದಾಗ ಅವರು ನನ್ನನ್ನು ಖಾಸಗಿಯಾಗಿ ಭೇಟಿಯಾಗಬಹುದೇ ಎಂದು ಕೇಳಿದ್ದರು. ಅದರ ಅರ್ಥ ಬೇರೆಯೇ ಆಗಿತ್ತು. ನಾನು ಈ ಆಘಾತ ಮತ್ತು ಕೋಪವನ್ನು ನನ್ನೊಳಗೇ ಇಟ್ಟುಕೊಂಡಿದ್ದೆ ಎಂದು ವರಲಕ್ಷ್ಮಿ ಟ್ವೀಟರ್ನಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.