
ಭೋಪಾಲ್(ಅ.31): ಮಧ್ಯಪ್ರದೇಶದ ಭೋಪಾಲ್ ಸೆಂಟ್ರಲ್ ಜೈಲಿನಿಂದ 8 ಉಗ್ರರು ಪರಾರಿಯಾದ ಘಟನೆ ನಡೆದಿದೆ. ನಿಷೇದಿತ ಸಿಮಿ ಸಂಘಟನೆಯ 8 ಉಗ್ರರು ತಡತಾತ್ರಿ 2 ಗಂಟೆಯಲ್ಲಿ ಪರಾರಿಯಾಗಿದ್ದು , ಪರಾರಿಯಾಗಲು ಕಂಬಳಿ ಮತ್ತು ಬೆಡ್ ಶೀಟ್ ಬಳಸಿದ್ದಾರೆ.
ಸಿನಿಮೀಯ ಶೈಲಿಯಲ್ಲಿ ಪರಾರಿಯಾಗಿರುವ ಉಗ್ರರು ಕಂಬಳಿಯನ್ನು ಹಗ್ಗದಂತೆ ಬಳಸಿ ಪರಾರಿಯಾಗಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಒರ್ವ ಗಾರ್ಡ್'ನನ್ನು ಕೊಲೆ ಮಾಡಿರುವ ಉಗ್ರರು ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೂ ಹಲ್ಲೆ ನಡೆಸಿದ್ದಾರೆ.
ಘಟನೆಯನ್ನು ಸ್ಪಷ್ಟಪಡಿಸಿರುವ ಗೃಹಸಚಿವ ಭೂಪೇಂದ್ರ ಸಿಂಗ್ ನಗರದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ ಎಸ್ ಪಿ ಅರವಿಂದ್ ಸಕ್ಸೇನಾ ಅವರಿಗೆ ಸೂಚಿಸಿದ್ದಾರೆ. ಸದ್ಯ ಪೊಲೀಸರು ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.