ಕೋಲಾರ ಅಷ್ಟೇ ಅಲ್ಲ, ದಾವಣಗೆರೆಯಲ್ಲೂ ಮಕ್ಕಳ ಮರಣ ಮೃದಂಗ

Published : Aug 23, 2017, 11:41 AM ISTUpdated : Apr 11, 2018, 12:55 PM IST
ಕೋಲಾರ ಅಷ್ಟೇ ಅಲ್ಲ, ದಾವಣಗೆರೆಯಲ್ಲೂ ಮಕ್ಕಳ ಮರಣ ಮೃದಂಗ

ಸಾರಾಂಶ

ಕೋಲಾರ ಅಷ್ಟೇ ಅಲ್ಲ ದಾವಣಗೆರೆಯಲ್ಲೂ ಮಕ್ಕಳ ಮರಣ ಮೃದಂಗ ಮುಂದುವರೆದಿದೆ. ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆ ಹೆರಿಗೆ ಮತ್ತು ಮಕ್ಕಳ ವಿಭಾಗದಲ್ಲಿ ಒಂದೇ ದಿನ ಮೂರು ಮಕ್ಕಳು ಸಾವನ್ನಪ್ಪಿವೆ.

ದಾವಣಗೆರೆ(ಆ.23): ಕೋಲಾರ ಅಷ್ಟೇ ಅಲ್ಲ ದಾವಣಗೆರೆಯಲ್ಲೂ ಮಕ್ಕಳ ಮರಣ ಮೃದಂಗ ಮುಂದುವರೆದಿದೆ. ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆ ಹೆರಿಗೆ ಮತ್ತು ಮಕ್ಕಳ ವಿಭಾಗದಲ್ಲಿ ಒಂದೇ ದಿನ ಮೂರು ಮಕ್ಕಳು ಸಾವನ್ನಪ್ಪಿವೆ.

ದಾವಣಗೆರೆ ತಾಲ್ಲೂಕಿನ ರುದ್ರನಕಟ್ಟೆ ಗ್ರಾಮದ ನೇತ್ರಾವತಿ ಎಂಬ ಗರ್ಭಿಣಿ ಹೆರಿಗೆಯಾದ ಎರಡು ಮಕ್ಕಳು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಶಿಶುಗಳ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಆದರೆ, ಆಸ್ಪತ್ರೆಗೆ ಬರುವ ಮುನ್ನವೇ ತಾಯಿಯ ಹೊಟ್ಟೆಯಲ್ಲಿ ಸಾವನ್ನಪ್ಪಿದ್ದವು ಅಂತ ವೈದ್ಯರು ಹೇಳ್ತಿದ್ದಾರೆ.

ಗರ್ಭಿಣಿ ಸಂಬಂಧಿಕರು ಆಸ್ಪತ್ರೆಗೆ ಬರುವಾಗ ಶಿಶುಗಳ ಬದುಕಿರುವ ಸೂಚನೆಯಿತ್ತು. ಸೀಜೇರಿಯನ್ ಮಾಡಿದ್ರೆ ಮಕ್ಕಳು ಬದುಕುತ್ತಿದ್ದವು ಆದರೆ ತಡವಾಗಿ ಚಿಕಿತ್ಸೆ ನೀಡಿದ್ದಕ್ಕೆ ಸಾವನ್ನಪ್ಪಿವೆ ಎಂದು ಹೇಳುತ್ತಾರೆ. 

ಇನ್ನೊಂದು ಪ್ರಕರಣದಲ್ಲಿ ಮಾಕನೂರಿನ ಸವಿತಾ ಎಂಬುವರ ಗಂಡು ಶಿಶು ಸಾವನ್ನಪ್ಪಿದ್ದು ಸಾವಿಗೆ ಸ್ಪಷ್ಟ ಕಾರಣ ತಿಳಿಯದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಂಗ್ಲಾದೇಶದಲ್ಲಿ ಅನಾಮಿಕನ ಕೈಚಳಕ, ಒಸ್ಮಾನ್ ಹದಿ ಬೆನ್ನಲ್ಲೇ ಮತ್ತೊಬ್ಬ ನಾಯಕನಿಗೆ ಗುಂಡೇಟು
ದುಬೈನ ಬುರ್ಜ್ ಖಲೀಫಾಗೆ ಬಡಿದ ಸಿಡಿಲು: ವೀಡಿಯೋ ವೈರಲ್