ಸವಾಲು ಸೋತ ದಿಲ್ಲಿ ಬಿಜೆಪಿ ಅಧ್ಯಕ್ಷ: ಆಪ್‌ಗೆ 1 ಲಕ್ಷ ದೇಣಿಗೆ!

Published : Dec 23, 2018, 11:27 AM IST
ಸವಾಲು ಸೋತ ದಿಲ್ಲಿ ಬಿಜೆಪಿ ಅಧ್ಯಕ್ಷ: ಆಪ್‌ಗೆ 1 ಲಕ್ಷ ದೇಣಿಗೆ!

ಸಾರಾಂಶ

ತಾನು ಹಾಕಿದ ಸವಾಲಿನಲ್ಲಿ ಸೋತ ದೆಹಲಿ ಬಿಜೆಪಿ ಅಧ್ಯಕ್ಷ ಆಮ್ ಆದ್ಮಿ ಪಕ್ಷಕ್ಕೆ ಕೊಟ್ಟ ಮಾತಿನಂತೆ 1 ಲಕ್ಷ ದೇಣಿಗೆ ನೀಡಿದ್ದಾರೆ. ಅಷ್ಟಕ್ಕೂ ಅವರು ಹಾಕಿದ್ದ ಸಾವಲೇನು ಅತೀರಾ? ಇಲ್ಲಿದೆ ವಿವರ

ನವದೆಹಲಿ[ಡಿ.23]: ದೆಹಲಿ ಮೆಟ್ರೋದ 4ನೇ ಹಂತಕ್ಕೆ ಆಮ್‌ಆದ್ಮಿ ಸರ್ಕಾರ ಹಸಿರು ನಿಶಾನೆ ದೊರೆತ ಬೆನ್ನಲ್ಲೇ ದೆಹಲಿಯ ಬಿಜೆಪಿ ರಾಜ್ಯಾಧ್ಯಕ್ಷ ಮನೋಜ್‌ ಕುಮಾರ್‌ ತಿವಾರಿ ಅವರು ಆಪ್‌ಗೆ 1.1 ಲಕ್ಷ ದೇಣಿಗೆ ಪ್ರಕಟಿಸಿದ್ದಾರೆ.

ಈ ದೇಣಿಗೆಯನ್ನು ಅನುಮಾನಾಸ್ಪದವಾಗಿ ಮೃತರಾದ ಎಎಪಿಯ ಇಬ್ಬರು ಮಹಿಳಾ ಕಾರ್ಯಕರ್ತೆಯರಾದ ಸಂತೋಷ್‌ ಕೋಲಿ, ಸೋನಿ ಮಿಶ್ರಾ ಕುಟುಂಬಕ್ಕೆ ನೀಡುವುದಾಗಿ ತಿವಾರಿ ಹೇಳಿದ್ದಾರೆ.

ದೆಹಲಿಯಲ್ಲಿ 4ನೇ ಹಂತದ ಮೆಟ್ರೋಗೆ ಹಸಿರು ನಿಶಾನೆ ನೀಡುವ ಮೂಲಕ ನಿಮ್ಮನ್ನು ಆಯ್ಕೆ ಮಾಡಿದ ದಿಲ್ಲಿ ಜನತೆಯನ್ನು ಮಾಲಿನ್ಯದಿಂದ ಮುಕ್ತಿಗೊಳಿಸಿ. ಒಂದೊಮ್ಮೆ ಮೆಟ್ರೋ ಯೋಜನೆಗೆ ಒಪ್ಪಿಗೆ ನೀಡಿದರೆ ದಿಲ್ಲಿ ಸರ್ಕಾರಕ್ಕೆ 1.1 ಲಕ್ಷ ದೇಣಿಗೆ ನೀಡುವುದಾಗಿ ತಿವಾರಿ ಸವಾಲು ಹಾಕಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!