ಸುವರ್ಣ ನ್ಯೂಸ್'ನಲ್ಲಿ ವರದಿ ಪ್ರಸಾರವಾದ ನಂತರ ಸಭೆ ರದ್ದುಗೊಳಿಸಿದ ನಾಯ್ಕ್

Published : Jan 11, 2017, 11:34 AM ISTUpdated : Apr 11, 2018, 12:48 PM IST
ಸುವರ್ಣ ನ್ಯೂಸ್'ನಲ್ಲಿ ವರದಿ ಪ್ರಸಾರವಾದ ನಂತರ ಸಭೆ ರದ್ದುಗೊಳಿಸಿದ ನಾಯ್ಕ್

ಸಾರಾಂಶ

ಡ್ರೀಮ್ಸ್​ ಜಿಕೆ, ಟಿಜಿಎಸ್​ ಕನ್ಸ್​ಟ್ರಕ್ಷನ್ಸ್​, ಸೆಂಡ್​ ಮೈ ಗಿಫ್ಟ್​, ಪೂಜಾ ಡಾಟ್​ ಕಾಂ ಹೀಗೆ ಚೆಂದ ಚೆಂದದ ಹೆಸರಿಟ್ಟುಕೊಂಡು ಜನರ ಕಣ್ಣಿಗೆ ಮಣ್ಣೆರಚಿದವನ ಹೆಸರು ಸಚಿನ್​ ನಾಯ್ಕ್​. ಈತ ಇಷ್ಟೇ ಅಲ್ಲ ಚೆಂದ ಚೆಂದದ ಹುಡುಗಿಯರನ್ನು ಕೆಲಸಕ್ಕಿಟ್ಟುಕೊಂಡು ತನ್ನ ವಂಚನೆಗೆ ಗ್ಲಾಮರ್​ ಟಚ್​ ಕೊಟ್ಟಿದ್ದ.

ಬೆಂಗಳೂರು(ಜ.11):ಸಾವಿರಾರು ಜನರಿಗೆ ವಂಚನೆ ಮಾಡಿದ ಡ್ರೀಮ್ಸ್ ಜಿಕೆ ಕಂಪನಿ ಮಾಲೀಕ ಸಚಿನ್ ನಾಯಕ್ ವಿರುದ್ಧ ದೂರು ದಾಖಲಾಗಿದೆ. ಸಚಿನ್ ನಾಯ್ಕ್ ಡ್ರೀಮ್ಸ್ ಜಿಕೆ ಕಂಪನಿ ಎದುರು ಸಾರ್ವಜನಿಕರು ಜಮಾಯಿಸಿದ್ದಾರೆ. ಇವತ್ತು ಹಣ ಕೊಟ್ಟು ಮೋಸ ಹೋದವರನ್ನು ಸಚಿನ್ ನಾಯಕ್​ ಸಭೆ ಕರೆದಿದ್ದರು. ಸುವರ್ಣ ನ್ಯೂಸ್​ನಲ್ಲಿ ವರದಿ ಪ್ರಸಾರವಾದ ನಂತರ ಸಚಿನ್ ನಾಯ್ಕ್ ಸಭೆಗೆ ಗೈರಾಗಿದ್ದಾರೆ. ವರದಿ ಪ್ರಸಾರ ನಂತರ ಸಭೆಯನ್ನು ರದ್ದು ಪಡಿಸಿದ್ದಾರೆ.

ಡ್ರೀಮ್ಸ್​ ಜಿಕೆ, ಟಿಜಿಎಸ್​ ಕನ್ಸ್​ಟ್ರಕ್ಷನ್ಸ್​, ಸೆಂಡ್​ ಮೈ ಗಿಫ್ಟ್​, ಪೂಜಾ ಡಾಟ್​ ಕಾಂ ಹೀಗೆ ಚೆಂದ ಚೆಂದದ ಹೆಸರಿಟ್ಟುಕೊಂಡು ಜನರ ಕಣ್ಣಿಗೆ ಮಣ್ಣೆರಚಿದವನ ಹೆಸರು ಸಚಿನ್​ ನಾಯ್ಕ್​. ಈತ ಇಷ್ಟೇ ಅಲ್ಲ ಚೆಂದ ಚೆಂದದ ಹುಡುಗಿಯರನ್ನು ಕೆಲಸಕ್ಕಿಟ್ಟುಕೊಂಡು ತನ್ನ ವಂಚನೆಗೆ ಗ್ಲಾಮರ್​ ಟಚ್​ ಕೊಟ್ಟಿದ್ದ. ಫ್ಲಾಟ್'​ಗಳನ್ನು ಕಟ್ಟಿಸಿಕೊಡುತ್ತೇನೆ ಎಂದು ನಂಬಿಸಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಜನರಿಂದ ಕೋಟ್ಯಂತರ  ರೂಪಾಯಿ ಹಣ ಸಂಗ್ರಹಿಸಿ ವಂಚಿಸಿದ್ದಾನೆ. ಫ್ಲಾಟ್​ ನಿರ್ಮಾಣ ಮಾಡುವ ಮುನ್ನವೇ ಮಾರುಕಟ್ಟೆಯ ಅರ್ಧ ಬೆಲೆಗೆ ಫ್ಲಾಟ್'​ಗಳನ್ನು ಕೊಡುತ್ತೇವೆ ಅಂತ ನಂಬಿಸಿ ಕೊಟ್ಯಾಂತರ ಹಣ ಸಂಗ್ರಹಿಸಿ ಒಬ್ಬನಿಗೂ ಒಂದು ಫ್ಲಾಟ್ ಕೊಟ್ಟಿಲ್ಲ. ಎಸಿ ಕಾರ್​'ನಲ್ಲಿ ಅಪಾರ್ಟ್​ಮೆಂಟ್​ ನಿರ್ಮಾಣದ ಸ್ಥಳಕ್ಕೆ ಜನರನ್ನು ಕರೆದೊಯ್ದು ಲಕ್ಷಾಂತರ ರೂಪಾಯಿ ಪೀಕಿದ್ದಾನೆ.

ಫ್ಲಾಟ್​'ಗಳನ್ನು ಕೊಡುವುದಾಗಿ ಜನರನ್ನು ನಂಬಿಸಿದ್ದ ಈ ಸಚಿನ್​ ನಾಯ್ಕ್​, ದಾಖಲೆಗಳಲ್ಲೆಲ್ಲೂ  ತನ್ನ ಹೆಸರಿಲ್ಲದಂತೆ ನೋಡಿಕೊಂಡಿದ್ದಾನೆ. ತನ್ನ ಪತ್ನಿಯ ಹೆಸರನ್ನು ಬದಲಾಯಿಸಿ ಕಾನೂನು ಕುಣಿಕೆಗೆ ಸಿಗದಂತೆ ತಪ್ಪಿಸಿಕೊಳ್ಳುವ ಯತ್ನ ನಡೆಸಿದ್ದಾನೆ. ಆರಂಭದಲ್ಲಿ ಈತನ ಉಪಚಾರ ಕಂಡು ಹಿ ಈಸ್ ಸ್ಮಾರ್ಟ್​ ಅಂದುಕೊಂಡಿದ್ದ ಜನ ಇದೀಗ ಹೀ ಈಸ್ ​ಮೋರ್ ಡೇಂಜರಸ್​ ಅನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಅಪಾರ್ಟ್​ಮೆಂಟ್​ಗಳನ್ನು ಕಟ್ಟಲು ಮುಂದಾಗಿದ್ದ  ಜಾಗಗಳನ್ನೂ ಮಾರಾಟ ಮಾಡಿ ಈಗ ನಾಪತ್ತೆಯಾಗಿದ್ದಾನೆ. ಸದ್ಯ ಸಚಿನ್ ನಾಯಕ್​, ಮುಂಬೈನಲ್ಲಿ  ತಲೆಮರೆಸಿಕೊಂಡಿದ್ದಾನೆ ಅನ್ನೋ ಮಾಹಿತಿಯನ್ನ  ಪೊಲೀಸರೇ ಹೇಳುತ್ತಿದ್ದರೂ, ಆತನ ವಿರುದ್ದದ ಕ್ರಮಕ್ಕೆ ಮುಂದಾಗದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿಯಾಗಿದೆ...! 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bhabana Menon: 'ಮಲಯಾಳಂ ಚಿತ್ರರಂಗದ ಹೆಮ್ಮೆ' ಎಂದ ಸಚಿವರು; ನಟಿ ಭಾವನಾಗೆ ಪ್ರಶಂಸೆ ಸುರಿಮಳೆ!'
ಆದಾಯ ಕಡಿಮೆ ಆಗಿದ್ದೋ, ಖರ್ಚು ಜಾಸ್ತಿಯಾಗಿದ್ದೋ! ಯೋಚಿಸಬೇಕಾದ ಕೆಲವು ಆರ್ಥಿಕ ಸಂಗತಿಗಳು