ಗೋಡ್ಸೆ ರಾಷ್ಟ್ರೀಯವಾದಿ: ಪ್ರಜ್ಞಾ ಬಳಿಕ ಮತ್ತೊಬ್ಬ ಬಿಜೆಪಿ ಶಾಸಕಿ ವಿವಾದ!

Published : May 30, 2019, 09:32 AM IST
ಗೋಡ್ಸೆ ರಾಷ್ಟ್ರೀಯವಾದಿ: ಪ್ರಜ್ಞಾ ಬಳಿಕ ಮತ್ತೊಬ್ಬ ಬಿಜೆಪಿ ಶಾಸಕಿ ವಿವಾದ!

ಸಾರಾಂಶ

ಗೋಡ್ಸೆ ತನ್ನ ಜೀವಿತಾವಧಿಯಲ್ಲಿ ದೇಶದ ಕುರಿತಾಗಿಯೇ ಚಿಂತಿತನಾಗಿದ್ದ ಅವರೊಬ್ಬ ರಾಷ್ಟ್ರೀಯವಾದಿ: ಪ್ರಜ್ಞಾ ಬಳಿಕ ಬಿಜೆಪಿ ಶಾಸಕಿ ವಿವಾದ!| 

ಇಂದೋರ್‌[ಮೇ.30]: ಲೋಕಸಭಾ ಚುನಾವಣಾ ಪ್ರಚಾರದ ಹೊತ್ತಿನಲ್ಲಿ ಬಿಜೆಪಿಯ ಹಾಲಿ ಸಂಸದೆ ಹಾಗೂ ಮಾಲೆಗಾಂವ್‌ ಬಾಂಬ್‌ ಸ್ಫೋಟದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರು ಮಹಾತ್ಮ ಗಾಂಧಿ ಹಂತಕ ನಾಥುರಾಮ್‌ ಗೋಡ್ಸೆಯನ್ನು ದೇಶಭಕ್ತ ಎಂದು ಸಂಭೋದಿಸಿ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದ ಬೆನ್ನಲ್ಲೇ, ಇದೀಗ ಮಧ್ಯಪ್ರದೇಶದ ಬಿಜೆಪಿ ಶಾಸಕಿಯೊಬ್ಬರು ಗೋಡ್ಸೆಯನ್ನು ರಾಷ್ಟ್ರೀಯವಾದಿ ಎಂದು ಕರೆದು ವಿವಾದದ ಕಿಡಿ ಹೊತ್ತಿಸಿದ್ದಾರೆ.

ಇಲ್ಲಿನ ಮೌ ವಿಧಾನಸಭೆ ಕ್ಷೇತ್ರದ ಶಾಸಕಿಯಾದ ಉಷಾ ಠಾಕೂರ್‌ ಅವರು, ಗೋಡ್ಸೆಯನ್ನು ರಾಷ್ಟ್ರೀಯವಾದಿ ಎನ್ನುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಗೋಡ್ಸೆ ಒಬ್ಬ ರಾಷ್ಟ್ರೀಯವಾದಿ. ತನ್ನ ಜೀವಿತಾವಧಿಯಲ್ಲಿ ದೇಶದ ಕುರಿತಾಗಿಯೇ ಚಿಂತಿತನಾಗಿದ್ದ. ಅಲ್ಲದೆ, ಗಾಂಧೀಜಿ ಅವರನ್ನು ಆತ ಏಕೆ ಗುಂಡು ಹಾರಿಸಿ ಹತ್ಯೆ ಮಾಡಿದ ಎಂಬುದು ಆತನಿಗೆ ಮಾತ್ರವೇ ಗೊತ್ತು ಎಂದು ಹೇಳಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಘಟಕವು, ಇದೊಂದು ತಿರುಚಿದ ವಿಡಿಯೋ ಆಗಿದೆ ಎಂದು ದೂರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿಗೆ ಸಮಾಧಿ ತೋಡುತ್ತೇವೆ: ಕಾಂಗ್ರೆಸ್ ವೋಟ್ ಚೋರಿ ಸಮಾವೇಶದಲ್ಲಿ ಕಾರ್ಯಕರ್ತರ ಘೋಷಣೆ
'ಇದಪ್ಪಾ ಕಾನ್ಪಿಡೆನ್ಸ್‌ ಅಂದ್ರೆ..' ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಬರೋ ಮುನ್ನವೇ 12 ಸಾವಿರ ಲಡ್ಡು ಮಾಡಿಸಿಟ್ಟ ಸ್ಪರ್ಧಿ!