
ಬೆಳಗಾವಿ : ಬೆಳಗಾವಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮಕ್ಕೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಆಗಮಿಸಿದ್ದರು.
ಆದರೆ, ಸ್ಥಳಕ್ಕೆ ಬಂದಾಗ ರಾಹುಕಾಲ ಇದೆ ಎಂದು ರೇವಣ್ಣ ಹತ್ತು ನಿಮಿಷ ಕಾರಿನಲ್ಲಿಯೇ ಕುಳಿತಿದ್ದರು.
ನಂತರ ಬೆಳಗ್ಗೆ 9.54ಕ್ಕೆ ಕಾರಿನಿಂದ ಕೆಳಗಿಳಿದು ಹಣೆಗೆ ವಿಭೂತಿ ಹಚ್ಚಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ರಾಹುಕಾಲವಿದೆ ಎನ್ನುವ ಕಾರಣಕ್ಕೆ ಕಾರಿನಿಂದ ಇಳಿಯದ ರೇವಣ್ಣ ಅಲ್ಪ ಸಮಯ ಬಿಟ್ಟು ಕಾರಿನಿಂದ ಇಳಿದರು.
ವಾಸ್ತು ಪ್ರಕಾರವೇ ನಡೆದುಕೊಳ್ಳುವ ಎಚ್.ಡಿ.ರೇವಣ್ಣ ಈ ಹಿಂದೆಯೂ ಕೂಡ ಅನೇಕ ಬಾರಿ ಇದೇ ರೀತಿ ವಾಸ್ತುವಿನಂತೆ ನಡೆದುಕೊಂಡಿರುವ ಘಟನೆಗಳು ನಡೆದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.