
ಮಡಿಕೇರಿ: ಭಾರೀ ಪ್ರಾಕೃತಿಕ ವಿಕೋಪ, ಭೂಕುಸಿತದಿಂದ ಚೇತರಿಸಿಕೊಳ್ಳುತ್ತಿರುವ ಕೊಡಗಿನಲ್ಲಿ ಮತ್ತೆ ಭೂಮಿಯೊಳಗೆ ಕೇಳಿಬರುತ್ತಿರುವ ಸದ್ದಿನಿಂದಾಗಿ ಆತಂಕ ಮನೆಮಾಡಿದೆ. ತಾಲೂಕಿನ ಕರಿಕೆ ಗ್ರಾಮದ ಚೆತ್ತುಕಾಯ ಪ್ರದೇಶದಲ್ಲಿ ಭೂಮಿಯೊಳಗೆ ಸೋಮವಾರ ಭಾರಿ ಶಬ್ದ ಕೇಳಿಸಿದ್ದು, ಈ ಭಾಗದ ಜನರಲ್ಲಿ ಭೀತಿ ಸೃಷ್ಟಿಸಿದೆ.
ಕಳ್ಳಾರ್ ಕೇಶವ ನಾಯ್ಕ ಎಂಬವರ ಮನೆಯ ಹಿಂಭಾಗದಲ್ಲಿ ಭೂಮಿಯೊಳಗೆ ಈ ಶಬ್ದ ಕೇಳಿಸಿದೆ. ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಈ ಶಬ್ದ ಕೇಳಿಬಂದಿದೆ. ಈ ಹಿಂದೆ ಕೊಡಗಿನಲ್ಲಿ ಭೂಮಿಯೊಳಗೆ ಇದೇ ರೀತಿಯ ಸದ್ದುಕೇಳಿಬಂದಿತ್ತು. ಆ ಬಳಿಕ ಭೂಕಂಪನದ ಅನುಭವ ಆಗಿತ್ತು. ಇದಾಗಿ ಕೆಲದಿನಗಳ ಬಳಿಕ ಸುರಿದ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡಕುಸಿದು ಭಾರೀ ಅನಾಹುತ ಸೃಷ್ಟಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.