
ಬಾಗಲಕೋಟೆ: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸಚಿವ ರಮೇಶ ಜಾರಕಿಹೊಳಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸುವಷ್ಟು ದೊಡ್ಡವಳು ನಾನಲ್ಲ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ರಮೇಶ್ ಜಾರಕಿಹೊಳಿ ಹೇಳಿಕೆ ಕುರಿತು ಏನೂ ಮಾತನಾಡುವುದಿಲ್ಲ. ಡಿ.ಕೆ.ಶಿವಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ.
ಅದರಲ್ಲಿ ನಾನೂ ಒಬ್ಬಳು ಎಂದು ತಿಳಿಸಿದರು. ಇನ್ನು ರಮೇಶ್ ಜಾರಕಿಹೊಳಿ ಪದೇ ಪದೆ ನನ್ನ ಹೆಸರು ಪ್ರಸ್ತಾಪಿಸುವುದು ಯಾಕೆಂದು ಗೊತ್ತಿಲ್ಲ. ಕಾಲ ಕಸ ಅಂದರು, ಸ್ಲಂನಿಂದ ಬಂದವರು ಅಂದರು. ಆದರೂ ನಾನು ಸುಮ್ಮನಿದ್ದೇನೆ ಎಂದು ಇದೇ ವೇಳೆ ಹೆಬ್ಬಾಳಕರ್ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.