
ಬೆಂಗಳೂರು(ಸೆ.22): ಡಿನೋಟಿಫಿಕೇಶನ್ ಕೇಸ್ ರಿಲೀಫ್ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಕಿಡ್ನಾಪ್ ಕೇಸ್ ಬಿಸಿತಟ್ಟಿದೆ.
ಈಶ್ವರಪ್ಪ ಪಿಎ ವಿನಯ್ ಕಿಡ್ನಾಪ್ ಪ್ರಕರಣದಲ್ಲಿ ಬಿಎಸ್ವೈಗೆ ನೋಟಿಸ್' ನೀಡಲಾಗಿದೆ. ಬಿಎಸ್'ವೈ ಪಿಎ ಸಂತೋಷ್ ವಿರುದ್ಧ ಕಿಡ್ನಾಪ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ವಿಭಾಗದ ಸಹಾಯಕ ಆಯುಕ್ತರಿಂದ ನೋಟಿಸ್'ನೀಡಲಾಗಿದೆ. ಸೆ.28 ರಂದು ಗುರುವಾರ ವಿಚಾರಣೆಗೆ ಹಾಜರಾಗುವಂತೆ ಬಿಎಸ್ವೈಗೆ ತಿಳಿಸಲಾಗಿದೆ.ವಿನಯ್ ಕೇಸ್ನ ವಿಚಾರಣೆ ವೇಳೆಯಲ್ಲಿ ಕಿಡ್ನಾಪ್ ಸಂಚಿನ ಬಗ್ಗೆ ಆರೋಪಿಗಳು ಬಾಯಿಬಿಟ್ಟಿದ್ದರು.
ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಎಸಿಬಿ ಎಫ್ಐಆರ್ ಕಾನೂನು ಪಾಲಿಸಿಲ್ಲ ಎಂಬ ಅಭಿಪ್ರಾಯಕ್ಕೆ ಬಂದ ಹೈಕೋರ್ಟ್ ಬಿಎಸ್ವೈ ವಿರುದ್ಧ ಎರಡೂ ಎಫ್ಐಆರ್ಗೂ ಮಧ್ಯಂತರ ತಡೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.