
ಬೆಂಗಳೂರು(ಡಿ.11): ಸೆಕ್ಸ್ ಹಾಗೂ ಕ್ರೈಂ ಬಗ್ಗೆ ಜನರಿಗಿರುವ ಆಸಕ್ತಿಯನ್ನೇ ಬಂಡವಾಳ ಮಾಡಿಕೊಂಡಿರುವ ರವಿ ಬೆಳಗೆರೆ ಕನ್ನಡದ ಸನ್ನಿ ಲಿಯೋನ್ ಎಂದು ಅಗ್ನಿ ಶ್ರೀಧರ್ ವ್ಯಂಗ್ಯವಾಡಿದ್ದಾರೆ.
ಸುಪಾರಿ ಕೇಸ್'ನಲ್ಲಿ ಬಂಧನವಾಗಿರುವ ರವಿ ಬೆಳಗೆರೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಗ್ನಿ ಶ್ರೀಧರ್, ಬೆಳಗೆರೆ 'ಪಾಪಿಗಳ ಲೋಕದಲ್ಲಿ' ಎಂದು ರೌಡಿಗಳ ಬಗ್ಗೆ ಬರೆಯುತ್ತಿದ್ದ, ಬರಹದ ಮೂಲಕವೇ ರೌಡಿಗಳ ನಡುವೆ ದ್ವೇಷ ಹುಟ್ಟು ಹಾಕ್ತಾಯಿದ್ದ ಎಂದು ಶ್ರೀಧರ್ ಆರೋಪ ಮಾಡಿದ್ದಾರೆ.
ಲೇಔಟ್ ಮಂಜನ ಹತ್ಯೆಗೆ, ಜೇಡರಹಳ್ಳಿ ಕೃಷ್ಣಪ್ಪನ ದ್ವೇಷಕ್ಕೆ ಬೆಳಗೆರೆ ಕಾರಣ ಎಂಬ ಗಂಭೀರ ಆರೋಪವನ್ನು ಅಗ್ನಿ ಶ್ರೀಧರ್ ಮಾಡಿದ್ದಾರೆ.
ಹಾಯ್ ಬೆಂಗಳೂರು ಕ್ರೈಂ ವರದಿಗಾರರಾಗಿದ್ದ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಆರೋಪದಡಿ ರವಿ ಬೆಳಗೆರೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.