ಶೀಘ್ರ ಮೂರು ರಾಜ್ಯದಲ್ಲಿ ಚುನಾವಣೆ : ಗೆಲುವಿನ ಭರವಸೆಯಲ್ಲಿ ಬಿಜೆಪಿ

Published : Jun 09, 2019, 03:20 PM IST
ಶೀಘ್ರ ಮೂರು ರಾಜ್ಯದಲ್ಲಿ ಚುನಾವಣೆ : ಗೆಲುವಿನ ಭರವಸೆಯಲ್ಲಿ ಬಿಜೆಪಿ

ಸಾರಾಂಶ

ಲೋಕಸಭಾ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಇದೇ ವರ್ಷ ಮತ್ತೆ ಮೂರು ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಇಲ್ಲಿಯೂ ಕೂಡ ಬಿಜೆಪಿ ಗೆಲುವಿನ ಭರವಸೆಯಲ್ಲಿದೆ.

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಭಾರತ ಭರ್ಜರಿ ಬಹುಮತಗಳಿಸಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಈ ಗೆಲುವು ಮುಂದಿನ ಮೂರು ರಾಜ್ಯಗಳ ಚುನಾವಣೆಗೆ ಬಿಜೆಪಿಗೆ ಮತ್ತಷ್ಟು ಶಕ್ತಿ ತುಂಬಿದೆ. 

ಮಹಾರಾಷ್ಟ್ರ, ಹರ್ಯಾಣ, ಜಾರ್ಖಂಡ್ ರಾಜ್ಯಗಳಲ್ಲಿ ಶೀಘ್ರದಲ್ಲೇ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಅಮಿತ್ ಮೂರು ರಾಜ್ಯಗಳ ಕೋರ್ ಕಮಿಟಿ ಸಭೆ ಕರೆದಿದ್ದಾರೆ. 

ಮೂರು ರಾಜ್ಯಗಳ ಕೋರ್ ಕಮಿಟಿಗಳೊಂದಿಗೆ ಅಮಿತ್ ಮುಂದಿನ ಚುನಾವಣೆ ಸಂಬಂಧ ಹಾಗೂ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಲು ಯಾವ ರೀತಿ ಕಾರ್ಯಪ್ರವೃತ್ತರಾಗಬೇಕು ಎನ್ನುವ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ. 

ಈ ವರ್ಷವೇ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನ  ನಡೆಸಲಾಗುತ್ತಿದೆ. ಅಲ್ಲದೇ ಬಿಜೆಪಿ ಅಧಿಕಾರಕ್ಕೇರುವ  ಆತ್ಮವಿಶ್ವಾಸವನ್ನು ಲೋಕಸಭಾ ಚುನಾವಣೆ ನೀಡಿದೆ. 

ಆದರೆ ಯಾವುದೇ  ವಿಚಾರವನ್ನೂ ಕೂಡ ಹಗುರವಾಗಿ ತೆಗೆದುಕೊಳ್ಳಲು ಬಿಜೆಪಿ ಅಧ್ಯಕ್ಷರು ಸಿದ್ಧರಿಲ್ಲ ಎನ್ನುವ ಸಂದೇಶವನ್ನು ಸಭೆ ಕರೆಯುವ ಮೂಲಕ ಅಮಿತ್ ಶಾ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?