ಆರ್’ಬಿಐ ಗವರ್ನರ್ ಊರ್ಜಿತ್ ಪಟೇಲ್, ಹಣಕಾಸು ಸಚಿವ ಅರುಣ್ ಜೇಟ್ಲಿ ಜೊತೆ ಸಭೆ ನಡೆಸಿದ್ದಾರೆ.
ನವದೆಹಲಿ : ಆರ್’ಬಿಐ ಗವರ್ನರ್ ಊರ್ಜಿತ್ ಪಟೇಲ್, ಹಣಕಾಸು ಸಚಿವ ಅರುಣ್ ಜೇಟ್ಲಿ ಜೊತೆ ಸಭೆ ನಡೆಸಿದ್ದಾರೆ.
ಈ ಇಬ್ಬರೂ ಕೂಡ ಸಭೆಯಲ್ಲಿ ದೇಶದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿರಬಹುದು ಎಂದು ಹೇಳಲಾಗಿದೆ. ಆರ್ಥಿಕ ವರ್ಷದ ಮೊದಲ ವಾರದಲ್ಲಿ ಪಾಲಿಸಿಗಳ ಬಗ್ಗೆ ವಿಮರ್ಶೆಗಳು ನಡೆದಿರಬಹುದು ಎನ್ನಲಾಗಿದೆ.
ಗುರುವಾರವಷ್ಟೇ ಮೊದಲ ಸಭೆ ನಡೆದಿದ್ದು, ಈ ಬಗ್ಗೆ ಯಾವುದೇ ರೀತಿಯಾದ ಮಾಹಿತಿಯನ್ನೂ ಕೂಡ ಬಹಿರಂಗ ಪಡಿಸಿಲ್ಲ. ಇನ್ನು ಆರ್ಥಿಕ ಅಭಿವೃದ್ಧಿ, ಹಣದುಬ್ಬರ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆಯೂ ಕೂಡ ಚರ್ಚೆ ನಡೆಸಿರಬಹುದು ಎನ್ನಲಾಗಿದೆ.