
ನವದೆಹಲಿ : ಆರ್’ಬಿಐ ಗವರ್ನರ್ ಊರ್ಜಿತ್ ಪಟೇಲ್, ಹಣಕಾಸು ಸಚಿವ ಅರುಣ್ ಜೇಟ್ಲಿ ಜೊತೆ ಸಭೆ ನಡೆಸಿದ್ದಾರೆ.
ಈ ಇಬ್ಬರೂ ಕೂಡ ಸಭೆಯಲ್ಲಿ ದೇಶದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿರಬಹುದು ಎಂದು ಹೇಳಲಾಗಿದೆ. ಆರ್ಥಿಕ ವರ್ಷದ ಮೊದಲ ವಾರದಲ್ಲಿ ಪಾಲಿಸಿಗಳ ಬಗ್ಗೆ ವಿಮರ್ಶೆಗಳು ನಡೆದಿರಬಹುದು ಎನ್ನಲಾಗಿದೆ.
ಗುರುವಾರವಷ್ಟೇ ಮೊದಲ ಸಭೆ ನಡೆದಿದ್ದು, ಈ ಬಗ್ಗೆ ಯಾವುದೇ ರೀತಿಯಾದ ಮಾಹಿತಿಯನ್ನೂ ಕೂಡ ಬಹಿರಂಗ ಪಡಿಸಿಲ್ಲ. ಇನ್ನು ಆರ್ಥಿಕ ಅಭಿವೃದ್ಧಿ, ಹಣದುಬ್ಬರ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆಯೂ ಕೂಡ ಚರ್ಚೆ ನಡೆಸಿರಬಹುದು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.