ಪ್ರಧಾನಿ ಮೋದಿ ಭೇಟಿಗೆ ಅವಕಾಶ ಸಿಗದೆ ಹತಾಶೆಗೊಂಡ ತಮಿಳುನಾಡು ಸಂಸದರು

Published : Oct 04, 2016, 10:11 AM ISTUpdated : Apr 11, 2018, 01:02 PM IST
ಪ್ರಧಾನಿ ಮೋದಿ ಭೇಟಿಗೆ ಅವಕಾಶ ಸಿಗದೆ ಹತಾಶೆಗೊಂಡ ತಮಿಳುನಾಡು ಸಂಸದರು

ಸಾರಾಂಶ

ನವದೆಹಲಿ(ಅ. 04): ಪ್ರಧಾನಿ ಮೋದಿಯವರನ್ನು ಭೇಟಿಯಾಗುವ ತಮಿಳುನಾಡು ಸಂಸದರ ಪ್ರಯತ್ನ ವಿಫಲವಾದ ಘಟನೆ ಮಂಗಳವಾರ ನಡೆದಿದೆ. ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರುದ್ಧ ಕೇಂದ್ರ ಸರಕಾರ ಸುಪ್ರೀಂಕೋರ್ಟ್'ನಲ್ಲಿ ಅಫಿಡವಿಟ್ ಸಲ್ಲಿಸಿರುವ ಕ್ರಮವನ್ನು ಖಂಡಿಸುವ ಸಲುವಾಗಿ ಎಐಎಡಿಎಂಕೆ ಸಂಸದರು ಇಂದು ಪ್ರಧಾನಿಯನ್ನು ಭೇಟಿಯಾಗಲು ಪ್ರಯತ್ನಿಸಿದ್ದರು. ಆದರೆ, ಯಾವುದೇ ಪೂರ್ವಾನುಮತಿ ಇಲ್ಲದೆಯೇ ಸಂಸದರು ಪ್ರಧಾನಿಯನ್ನು ಭೇಟಿಯಾಗಲು ಯತ್ನಿಸಿದ್ದರಿಂದ ಭೇಟಿಯ ಅವಕಾಶ ಸಿಗಲಿಲ್ಲ. ಇದರಿಂದ ಆಕ್ರೋಶಗೊಂಡ ಎಐಎಡಿಎಂಕೆ ಸಂಸದರು ಪ್ರಧಾನಿ ಕಾರ್ಯಾಲಯದ ಸಿಬ್ಬಂದಿ ಜೊತೆ ವಾಗ್ವಾದಕ್ಕಿಳಿದರು. ಬೆಳಗ್ಗೆ 11 ಗಂಟೆಗೆ ವಿಜಯ್'ಚೌಕ್'ನಿಂದ ಮೆರವಣಿಗೆ ಹೊರಟ ತಮಿಳುನಾಡು ಸಂಸದರು ಪ್ರಧಾನಿ ಕಚೇರಿಗೆ ಮುತ್ತಿಗೆ ಹಾಕಲೂ ಯತ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಹೊಸ 600 ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭ: ಗೃಹ ಸಚಿವ ಪರಮೇಶ್ವರ್‌
ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ