
ಚೆನ್ನೈ (ಡಿ.05): ತಮಿಳುನಾಡು ಮುಖ್ಯಮಂತ್ರಿ ಜಯಾಲಲಿತಾಗೆ ಹೃದಯಾಘಾತವಾಗಿರುವ ಸುದ್ದಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದೆ.
ಜಯಾಗೆ ಹೃದಾಯಘಾತವಾಗಿರುವ ಸುದ್ದಿ ತಿಳಿದು ಪಕ್ಷದ ಕಾರ್ಯಕರ್ತನೊಬ್ಬ ಅಘಾತದಿಂದ ಸಾವನಪ್ಪಿದ್ದಾನೆಂದು ವರದಿಯಾಗಿದೆ.
ಜಯಾಗೆ ಹೃದಯಾಘಾತವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕಡಲೋರ್ ಜಿಲ್ಲೆಯ ಎಐಎಡಿಎಂಕೆ ಕಾರ್ಯಕರ್ತನಾಗಿರುವ ನೆಲಗಂದನ್'ಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಜಯಾ ಮೃತಪಟ್ಟಿದ್ದಾರೆಂಬ ವದಂತಿ ಹಬ್ಬಿದಾಗ, ಕಳೆದ ಅ.6ರಂದು ಕೂಡಾ ಕೊಯಂಬತ್ತೂರಿನ ಓರ್ವ ಕಾರ್ಯಕರ್ತ ಸಾವನಪ್ಪಿರುವ ಘಟನೆ ವರದಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.