
ಗಾಜಿಯಾಬಾದ್[ಅ.08]: ಫೆಬ್ರವರಿಯಲ್ಲಿ ನಡೆದಿದ್ದ ಬಾಲಾಕೋಟ್ ದಾಳಿ ವೇಳೆ, ಗಡಿ ನಿಯಂತ್ರಣಾ ರೇಖೆ ದಾಟಿ ಬಂದಿದ್ದ ಪಾಕಿಸ್ತಾನದ ಎಫ್ 16 ವಿಮಾನವನ್ನು ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ವಾಯುಸೇನಾ ದಿನದಂದು ಮತ್ತೆ ಮಿಂಚಿದ್ದಾರೆ.
ವಿಂಗ್ ಕಮಾಂಡರ್ ಅಭಿನಂದನ್ ನೇತೃತ್ವದ ತಂಡ ಮಂಗಳವಾರ ಗಾಜಿಯಾಬಾದ್ ನ ಹಿಂಡನ್ ವಾಯುನೆಲೆಯಲ್ಲಿ ನಡೆದ ವಾಯುಪಡೆಯ ದಿನದ ಮೆರವಣಿಗೆಯಲ್ಲಿ ಮಿಗ್ -21 ಯುದ್ಧ ವಿಮಾನವನ್ನು ಹಾರಿಸಿದ್ದಾರೆ. 'ಎವೆಂಜರ್ ಫಾರ್ಮೇಷನ್ ನಲ್ಲಿ 3 ಮಿರಾಜ್ 2000 ಯುದ್ಧ ವಿಮಾನಗಳು ಹಾಗೂ 2 SU-30 MKI ಯುದ್ಧ ವಿಮಾನಗಳು ಹಾರಾಟ ನಡೆಸಿವೆ.
ಇನ್ನು ಏರ್ ಶೋಗಾಗಿ ಅಭಿನಂದನ್ ಏರ್ಬೇಸ್ ಪ್ರವೇಶಿಸುತ್ತಿದ್ದಂತೆ ಸಾರ್ವಜನಿಕರು ಚಪ್ಪಾಳೆಗಳ ಸುರಿಮಳೆಗೈದಿದ್ದಾರೆ. ಇನ್ನು ಇದೇ ಮೊದಲ ಬಾರಿ ವಿಶ್ವದ ಅತ್ಯಂತ ಅಪಾಯಕಾರಿ ಯುದ್ಧ ವಿಮಾನ ಅಪಾಚೆ ತನ್ನ ಶಕ್ತಿ ಪ್ರದರ್ಶನ ತೋರಿದ್ದು ವಿಶೇಷವಾಗಿತ್ತು. ಚಿನೂಕ್ ಹೆಲಿಕಾಪ್ಟರ್ಗಳು ಕೂಡ ಆಗಸದಲ್ಲಿ ಶಕ್ತಿ ಪ್ರದರ್ಶಿಸಿದವು. ಜೊತೆಗೆ ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನದ ಆರ್ಭಟವನ್ನು ಕಾರ್ಯಕ್ರಮದಲ್ಲಿ ನೆರೆದವರು ಕಣ್ತುಂಬಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.