
ನವದೆಹಲಿ: ಕೇಂದ್ರ ಸರ್ಕಾರ ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ನಿರ್ಧಾರದ ಬಗ್ಗೆ ಸ್ವತಃ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇಡೀ ಒಪ್ಪಂದ ಪ್ರಕ್ರಿಯೆಯಲ್ಲಿ ಸಂಭಾವ್ಯ ಹಗರಣ ನಡೆದಿದೆ ಎಂದು ಶಂಕಿಸಿರುವ ಸ್ವಾಮಿ, ಶೀಘ್ರವೇ ಈ ಕುರಿತು ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸುವುದಾಗಿ ಹೇಳಿದ್ದಾರೆ.
ಏರ್ಇಂಡಿಯಾವನ್ನು ‘ಕುಟುಂಬದ ಆಸ್ತಿ’ ಎಂದು ಬಣ್ಣಿಸಿರುವ ಸ್ವಾಮಿ, ಬಂಡವಾಳ ಹಿಂಪಡೆಯುವ ಯೋಜನೆ ಹೆಸರಲ್ಲಿ ಕುಟುಂಬದ ಆಸ್ತಿ ಮಾರುವುದು ಸರಿಯಲ್ಲ ಎಂದು ವಾದಿಸಿದ್ದಾರೆ. ಸರ್ಕಾರದ ಈ ಕ್ರಮವನ್ನು ವಿಪಕ್ಷಗಳ ಕೂಡಾ ಕಟುವಾಗಿ ಟೀಕಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.