
ನವದೆಹಲಿ[ಸೆ.17]: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕೃತ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದು 3 ಗಂಟೆ ಪ್ರಯಾಣ ವಿಳಂಬವಾಗಿದ್ದು, ಏರಿಂಡಿಯಾ ಈ ಕುರಿತು ತನಿಖೆಗೆ ಆದೇಶಿಸಿದೆ.
ಕೋವಿಂದ್ ಅವರು ಸ್ವಿಜರ್ಲೆಂಡ್ನ ಜ್ಯೂರಿಚ್ನಿಂದ ಸ್ಲೊವೇನಿಯಾಗೆ ತಮ್ಮ ವಿಶೇಷ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಆದರೆ ಈ ವೇಳೆ ಇದ್ದಕ್ಕಿದ್ದಂತೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.
ಇದರ ದುರಸ್ತಿಗೆ ಸುಮಾರು 3 ಗಂಟೆ ತಗುಲಿದೆ. ಹೀಗಾಗಿ ಏರ್ಪೋರ್ಟ್ಗೆ ಆಗಮಿಸಿದ ಕೋವಿಂದ್ ಅವರು ವಿಮಾನದಲ್ಲಿ ಸಮಸ್ಯೆ ಉಂಟಾದ್ದರಿಂದ ಮರಳಿ ಹೋಟೆಲ್ಗೆ ಪ್ರಯಾಣಿಸಬೇಕಾಯಿತು. ರಾಷ್ಟ್ರಪತಿ ಪ್ರಯಾಣಕ್ಕೆ ಅಡಚಣೆ ಉಂಟಾದ ಕಾರಣ ಏರಿಂಡಿಯಾ ತನಿಖೆಗೆ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.