ವಾಯು ಮಾಲಿನ್ಯದಿಂದ ನಿಮಿಷಕ್ಕೆರಡು ಭಾರತೀಯರು ಸಾಯುತ್ತಿದ್ದಾರೆ...!

Published : Feb 19, 2017, 10:47 AM ISTUpdated : Apr 11, 2018, 01:02 PM IST
ವಾಯು ಮಾಲಿನ್ಯದಿಂದ ನಿಮಿಷಕ್ಕೆರಡು ಭಾರತೀಯರು ಸಾಯುತ್ತಿದ್ದಾರೆ...!

ಸಾರಾಂಶ

ವಾಯು ಮಾಲಿನ್ಯ ಹಾಗೂ ಹವಾಮಾನ ಬದಲಾವಣೆ ಒಂದಕ್ಕೊಂದು ಸಂಬಂಧ ಹೊಂದಿದ್ದು, ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಂಶೋಧಕರ ತಂಡ ಅಭಿಪ್ರಾಯಪಟ್ಟಿದೆ.

ನವದೆಹಲಿ(ಫೆ.19): ದೇಶದಲ್ಲಿ ವಾಯುಮಾಲಿನ್ಯದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದರಲ್ಲೂ ಭಾರತದಲ್ಲಿ ವಾಯುಮಾಲಿನ್ಯದಿಂದ ಪ್ರತಿ ನಿಮಿಷ ಸರಾಸರಿ ಎರಡು ಮಂದಿ ಅಸುನೀಗುತ್ತಿದ್ದಾರೆ ಎಂಬ ಆಘಾತಕಾರಿ ಅಂಶ ಹೊಸ ಸಂಶೋಧನೆಯಿಂದ ಹೊರಬಿದ್ದಿದೆ.

ದ ಲಾನ್ಸೆಟ್ ಎಂಬ ವರದಿಯ ಪ್ರಕಾರ, ಜಗತ್ತಿನ ಕೆಲವು ಮಾಲಿನ್ಯ ಹೊಂದಿರುವ ದೇಶಗಳ ಪೈಕಿ ಭಾರತದಲ್ಲಿ ವಾಯುಮಾಲಿನ್ಯದಿಂದ ಪ್ರತಿ ವರ್ಷ ಒಂದು ಮಿಲಿಯನ್'ಗೂ ಅಧಿಕ ಮಂದಿ ಅಸುನೀಗುತ್ತಿದ್ದಾರೆ ಎಂದು ತಿಳಿಸಿದೆ.

ವಾಯು ಮಾಲಿನ್ಯ ಹಾಗೂ ಹವಾಮಾನ ಬದಲಾವಣೆ ಒಂದಕ್ಕೊಂದು ಸಂಬಂಧ ಹೊಂದಿದ್ದು, ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಂಶೋಧಕರ ತಂಡ ಅಭಿಪ್ರಾಯಪಟ್ಟಿದೆ.

ಇತ್ತೀಚಿನ ದಿನಗಳಲ್ಲಿ ವಾಯುಮಾಲಿನ್ಯವು ಜನರ ಪಾಲಿಗೆ ಮಾರಕ ರೂಪವಾಗಿ ಪರಿಣಮಿಸಿದೆ. ಅದರಲ್ಲೂ ಕಲ್ಲಿದ್ದಲು ಮೂಲದ ಹೊಗೆಯಿಂದ ಶೇ.50 ರಷ್ಟು ವಾಯುಮಾಲಿನ್ಯ ಸಂಭವಿಸುತ್ತಿದೆ ಎಂದು ವರದಿ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಮಧು ಬಂಗಾರಪ್ಪ
ಡಿಕೆಶಿ ಕುಂಡಲಿಯಲ್ಲಿ ಷಷ್ಠ ಸ್ಥಾನದಲ್ಲಿ ಶನಿ: ರಾಜಕೀಯ ಭವಿಷ್ಯವೇನು? CM ಖುರ್ಚಿ ಯಾರಿಗೆ? ಭೈರವಿ ಅಮ್ಮ ಸ್ಫೋಟಕ ನುಡಿ