
ಮುಂಬೈ (ಮಾ.18): ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ತಂದೆ ಕೃಷ್ಣರಾಜ್ ರೈ ಇಂದು ಮುಂಬೈಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಇಲ್ಲಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲತ: ಮಂಗಳೂರಿನ ಕೌಡೂರುನವರಾಗಿರುವ ಕೃಷ್ಣರಾಜ್ ಭಾರತೀಯ ಸೇನೆಯಲ್ಲಿ ಜೀವಶಾಸ್ತ್ರಜ್ಞರಾಗಿ ಸೇವೆ ಸಲ್ಲಿಸಿ ಬಳಿಕ ಮುಂಬೈಯಲ್ಲಿ ನೆಲೆಸಿದ್ದರು.
ಅವರು ಪತ್ನಿ ಬೃಂದಾ, ಪುತ್ರ ಆದಿತ್ಯ ಹಾಗೂ ಪುತ್ರಿ ಐಶ್ವರ್ಯ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಾಂಟಾಕ್ರೂಝ್’ನಲ್ಲಿರುವ ಪವನ್’ಹಂಸ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.