
ಮೈಸೂರು: ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಕೊಲೆ ಮಾಡಿದ ಆರೋಪಿ ಪ್ರಧಾನಿ ಮೋದಿ ಅವರ ಮನೆಯಲ್ಲಿ ಅಡಗಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಮಾಡಲು ಸಾಧ್ಯ? ಹೀಗೆಂದು ಪ್ರಶ್ನಿಸುವ ಮೂಲಕ ಹಿರಿಯ ವಕೀಲ ಎ.ಕೆ. ಸುಬ್ಬಯ್ಯ ಅವರು ವಿವಾದ ಸೃಷ್ಟಿಸಿದ್ದಾರೆ.
ಸಮಾರಂಭವೊಂದರಲ್ಲಿ ಅವರು ಮಾತನಾಡಿ, ಸಿದ್ದರಾಮಯ್ಯ ಮೋದಿ ಮನೆಯನ್ನು ಪರಿಶೀಲಿಸಲು ಸಾಧ್ಯವಿಲ್ಲ. ಗೌರಿ ಕೊಲೆ ಮಾಡಿದ ವ್ಯಕ್ತಿ ಯಾರು ಅಂತ ಗೊತ್ತಿಲ್ಲ. ಆದರೆ, ಕೊಲೆ ಮಾಡಿಸಿದ ಶಕ್ತಿ ಯಾರು ಎಂಬುದು ನಮಗೆ ಗೊತ್ತಿದೆ ಎಂದರು.
ಬಿಜೆಪಿಯನ್ನ ಎರಡಕ್ಕೆ ಕೂರಿಸಿದ್ದೆ!: ನಾನು ಜನಸಂಘದ ಅಧ್ಯಕ್ಷನಾಗಿದ್ದಾಗ ಕರ್ನಾಟಕದಲ್ಲಿ 18 ಮಂದಿ ಗೆದ್ದಿದ್ದೆವು. ವಿಧಾನಮಂಡಲದಲ್ಲಿ ಹಲವರು ನನ್ನನ್ನು ‘ಯು ಆರ್ ರೈಟ್ ಪರ್ಸನ್, ಯು ಆರ್ ಇನ್ ರಾಂಗ್ ಪಾರ್ಟಿ’ ಎನ್ನುತ್ತಿದ್ದರು. ಆ ಬಗ್ಗೆ ಯೋಚಿಸಿ ನಂತರ ನಡೆದ ಚುನಾವಣೆಯಲ್ಲಿ ಜನಸಂಘದವರನ್ನು 18 ರಿಂದ 2ಕ್ಕೆ ಕೂರಿಸಿ ಪಕ್ಷವನ್ನು ಛಿದ್ರ ಮಾಡಿದ್ದೆ ಎಂದು ಸುಬ್ಬಯ್ಯ ಸ್ಫೋಟಕ ‘ಸತ್ಯ’ ಬಿಚ್ಚಿಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.