ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು

Published : Jun 19, 2018, 01:47 PM IST
ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು

ಸಾರಾಂಶ

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು  ಎನ್ನುವುದು ನಮ್ಮೆಲ್ಲರ ಆಸೆಯಾಗಿತ್ತು. ಪಕ್ಷಕ್ಕೆ‌ ಬಹುಮತ ಸಿಗದೇ ಇರುವ ಕಾರಣ ಸಿಎಂ‌ ಆಗಲ್ಲಿಲ್ಲ. ಸಿದ್ದರಾಮಯ್ಯ ವ್ಯಕ್ತಿತ್ವ ಆಕಾಶದೆತ್ತರಕ್ಕೆ ಬೆಳೆದಿದೆ ಎಂದು ಎ.ಕೆ ಸುಬ್ಬಯ್ಯ ಹೇಳಿದ್ದಾರೆ. 

ಬೆಂಗಳೂರು :  ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು  ಎನ್ನುವುದು ನಮ್ಮೆಲ್ಲರ ಆಸೆಯಾಗಿತ್ತು. ಪಕ್ಷಕ್ಕೆ‌ ಬಹುಮತ ಸಿಗದೇ ಇರುವ ಕಾರಣ ಸಿಎಂ‌ ಆಗಲಿಲ್ಲ. ಸಿದ್ದರಾಮಯ್ಯ ವ್ಯಕ್ತಿತ್ವ ಆಕಾಶದೆತ್ತರಕ್ಕೆ ಬೆಳೆದಿದೆ ಎಂದು ಎ.ಕೆ ಸುಬ್ಬಯ್ಯ ಹೇಳಿದ್ದಾರೆ. 

ಬಿಜೆಪಿಗೆ ಸರ್ಕಾರ ರಚಿಸಲು ಬಹುಮತ ಸಿಗಲಿಲ್ಲ. ಇದು‌ ಖುಷಿಯ ವಿಚಾರವಾಗಿದೆ. ಆದರೆ ಮೋದಿ, ಮತ್ತು ಚಡ್ಡಿವಾಲಾ ಕುತಂತ್ರ ಮಾಡಿದರು. ವಜುಭಾಯಿ ವಾಲಾ ಆರ್ ಎಸ್ ಎಸ್ ಎಜೆಂಟ್ ಆಗಿದ್ದು,  ಕುತಂತ್ರದಿಂದ ಸರ್ಕಾರ ರಚನೆ ಮಾಡಲು ಹೊರಟಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ. 

ಇನ್ನು ಇದೇ ವೇಳೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ಅವರು ಯಡಿಯೂರಪ್ಪ ಸರ್ಕಾರ ಇದ್ದಿದ್ದರೆ ಗೌರಿ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ ಎಂದಿದ್ದು, ಶೋಭಾ ಕರಂದ್ಲಾಜೆ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. 

ಇನ್ನು ಜಯಮಾಲ ಅವರಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸುಬ್ಬಯ್ಯ ಜಯಮಾಲಾಗೆ ನಿಯಮ ಉಲ್ಲಂಘನೆ ಮಾಡಿ ಸಚಿವ ಸ್ಥಾನ ನೀಡಿದ್ದಾರೆ ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ಮನೆಯಿಂದ ಡೆಲಿವರಿ ಬಾಯ್ಸ್ ಕಳ್ಳತನ!
ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!