
ನವದೆಹಲಿ (ಫೆ.14): ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಪ್ರಶ್ನಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್,ವಾಕ್ ಪ್ರಹಾರ ನಡೆಸಿದ್ದಾರೆ. ಸಮಾಜವಾದಿ ಪಕ್ಷ ಈ ಬಾರಿ ಚುನಾವಣೆ ಗೆಲ್ಲಲು ಸಹಾಯ ನೀಡಿ ಎಂದು ಮತದಾರರಲ್ಲಿ ಕೇಳಿಕೊಂಡಿದ್ದಾರೆ.
“ ನಮ್ಮ ಕೆಲಸವನ್ನು ಅವರು ಪ್ರಶ್ನಿಸುತ್ತಾರೆ. ರಾಜ್ಯದಲ್ಲಿ ನಾವೇನೂ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಮೋದಿ ಹೇಳುತ್ತಾರೆ. ಉತ್ತರ ಪ್ರದೇಶದಲ್ಲಿ ಮೆಟ್ರೋ ಸೇವೆಯ ಬಗ್ಗೆ ಮೋದಿ ಪ್ರಶ್ನೆ ಎತ್ತಿದ್ದಾರೆ. ಗಾಜಿಯಾಬಾದ್, ನೋಯ್ಡಾ ಅಥವಾ ಲಕ್ನೋ ಇವುಗಳಲ್ಲಿ ಯಾವುದರಲ್ಲಿ ಮೊದಲು ಪ್ರಯಾಣಿಸಲು ಇಚ್ಚಿಸುತ್ತಾರೆ” ಎಂದು ಅಖಿಲೇಶ್ ಕೇಳಿದ್ದಾರೆ.
ಮೂಲಭೂತ ಸೌಕರ್ಯಗಳು ಮತ್ತು ರಸ್ತೆಗಳ ಬಗ್ಗೆ ಮಾತನಾಡುವ ಪ್ರಧಾನಿಯವರು ಮೊದಲು ಕಾಮಗಾರಿ ನಡೆದ ರಸ್ತೆಗಳಲ್ಲಿ ಸಂಚರಿಸಲಿ. ರಸ್ತೆಗಳ ಬಗ್ಗೆ ಮಾತನಾಡುವ ಯಾರೇ ಆಗಲಿ ಒಮ್ಮೆ ಸಂಚರಿಸಿದರೆ ನಮ್ಮ ಪಕ್ಷಕ್ಕೆ ಮತ ನೀಡುವುದು ಗ್ಯಾರೆಂಟಿ ಎಂದು ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.