ಉತ್ತರ ಪ್ರದೇಶ ಹಣೆಬರಹ ಬದಲಾಯಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ

Published : Feb 04, 2017, 10:47 AM ISTUpdated : Apr 11, 2018, 12:58 PM IST
ಉತ್ತರ ಪ್ರದೇಶ ಹಣೆಬರಹ ಬದಲಾಯಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ

ಸಾರಾಂಶ

ನವದೆಹಲಿ (ಫೆ.04): ಮುಂಬರಲಿರುವ ಉತ್ತರ ಪ್ರದೇಶ ಚುನಾವಣೆ ರಾಜ್ಯದ ಹಣೆಬರಹವನ್ನು ಬದಲಾಯಿಸಲು ಉತ್ತಮ ಅವಕಾಶ. ಬಿಜೆಪಿಗೆ ಮಾತ್ರ ರಾಜ್ಯದ ಭವಿಷ್ಯವನ್ನು ಬದಲಾಯಿಸಲು ಸಾಧ್ಯವೆಂದು ಅಮಿತ್ ಶಾ ಹೇಳಿದ್ದಾರೆ.

ನವದೆಹಲಿ (ಫೆ.04): ಮುಂಬರಲಿರುವ ಉತ್ತರ ಪ್ರದೇಶ ಚುನಾವಣೆ ರಾಜ್ಯದ ಹಣೆಬರಹವನ್ನು ಬದಲಾಯಿಸಲು ಉತ್ತಮ ಅವಕಾಶ. ಬಿಜೆಪಿಗೆ ಮಾತ್ರ ರಾಜ್ಯದ ಭವಿಷ್ಯವನ್ನು ಬದಲಾಯಿಸಲು ಸಾಧ್ಯವೆಂದು ಅಮಿತ್ ಶಾ ಹೇಳಿದ್ದಾರೆ.

ಚುನಾವಣಾ ರ್ಯಾಲಿಯನ್ನುದ್ದೇಶಿಸಿ, ಉತ್ತರ ಪ್ರದೇಶಕ್ಕೆ ಜಾತಿ, ಧರ್ಮದ ಆಧಾರದ ಮೇಲೆ ಕಾರ್ಯನಿರ್ವಹಿಸುವ ಸರ್ಕಾರ ಬೇಕಿಲ್ಲ. ಬದಲಿಗೆ ಕಾನೂನಿನ ಪ್ರಕಾರ ಕಾರ್ಯ ನಿರ್ವಹಿಸುವ ಸರ್ಕಾರದ ಅಗತ್ಯವಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅಖಿಲೇಶ್ ಯ಻ದವ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯ ಅಭಿವೃದ್ಧಿಯಾಗುತ್ತದೆ ಎಂದು ಶಾ ಹೇಳಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ 3 ಮತ್ತು 4 ನೇ ಹಂತದ ಸಂದರ್ಶನಕ್ಕೆ ಇತಿಶ್ರೀ ಹಾಡುತ್ತೇವೆ. ಮೆರಿಟ್ ಆಧಾರದ ಮೇಲೆ ಉದ್ಯೋಗ ನೀಡುತ್ತೇವೆ. ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ, ಸಣ್ಣ ಹಾಗೂ ಮದ್ಯಮ ರೈತರಿಗೆ ಸಾಲ ಸೌಲಭ್ಯಗಳನ್ನು ನೀಡುತ್ತೇವೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿಗಳ 'ಬೆಳಕಿನ ಹಬ್ಬ'ದಂದೇ ಭಯೋತ್ಪಾದಕ ದಾಳಿ! ಹನುಕ್ಕಾ ಫೆಸ್ಟಿವಲ್ ಮಹತ್ವ, ಇತಿಹಾಸ ತಿಳಿಯಿರಿ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!