
ನವದೆಹಲಿ[ಜ.08]: ಅಕ್ರಮ ಮರಳು ಗಣಿಕಾರಿಕೆ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ವಿಚಾರಣೆಗೆ ಗುರಿಪಡಿಸುವ ತನ್ನ ನಿರ್ಧಾರಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿರುವ ಬೆನ್ನಲ್ಲೇ, ಯಾದವ್ ವಿರುದ್ಧ ಕ್ರಮ ಕೈಗೊಳ್ಳಲು ಕಾರಣವಾಗಿರುವ ಅಂಶಗಳನ್ನು ಸಿಬಿಐ ಸೋಮವಾರ ಬಿಡುಗಡೆ ಮಾಡಿದೆ.
ಅಖಿಲೇಶ್ ಯಾದವ್ ಸಿಎಂ ಆಗಿದ್ದ ವೇಳೆ, ಗಣಿಗಾರಿಕೆ ಖಾತೆಯನ್ನೂ ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಆ ಅವಧಿಯಲ್ಲಿ ಅವರು ಒಟ್ಟು 14 ಗಣಿ ಲೈಸೆನ್ಸ್ಗಳನ್ನು ಅನುಮೋದಿಸಿದ್ದರು. ಈ ಪೈಕಿ 13 ಲೈಸೆನ್ಸ್ಗಳನ್ನು 2013ರ ಫೆ.17ರಂದು ಒಂದೇ ದಿನ ವಿತರಿಸಿದ್ದರು. ಇದು ಸಾಕಷ್ಟುಅನುಮಾನಗಳಿಗೆ ಕಾರಣವಾಗಿದೆ ಎಂದು ಸಿಬಿಐ ದಾಖಲೆಗಳನ್ನು ಬಿಡುಗಡೆ ಮಾಡಿದೆ.
ಎರಡು ದಿನಗಳ ಹಿಂದಷ್ಟೇ ಸಿಬಿಐ ಅಧಿಕಾರಿಗಳು, ಅಕ್ರಮ ಮರಳು ಗಣಿಗಾರಿಕೆ ಪ್ರಕರಣ ಸಂಬಂಧ 14 ಸ್ಥಳಗಳ ಮೇಲೆ ದಾಳಿ ನಡೆಸಿ 11 ಜನರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿತ್ತು. ಈ ಪೈಕಿ ಸಮಾಜವಾದಿ ಪಕ್ಷದ ನಾಯಕರು, ಐಎಎಸ್ ಅಧಿಕಾರಿ ಚಂದ್ರಕಲಾ ಹೆಸರು ಕೂಡಾ ಇತ್ತು. ಆದರೆ ಇದು ರಾಜಕೀಯ ಉದ್ದೇಶದಿಂದ ನಡೆಸಿದ ದಾಳಿ ಎಂದು ಎಸ್ಪಿ, ಬಿಎಸ್ಪಿ, ಆಮ್ಆದ್ಮಿ ಪಕ್ಷಗಳು ಆರೋಪಿಸಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ