ಉತ್ತರ ಪ್ರದೇಶ: ರಾಹುಲ್‌ ಗಾಂಧಿಗೆ 'ಕೈ' ಎತ್ತಿದ ಮಾಯಾ, ಅಖಿಲೇಶ್!

Published : Jan 05, 2019, 12:15 PM ISTUpdated : Jan 05, 2019, 01:11 PM IST
ಉತ್ತರ ಪ್ರದೇಶ: ರಾಹುಲ್‌ ಗಾಂಧಿಗೆ 'ಕೈ' ಎತ್ತಿದ ಮಾಯಾ, ಅಖಿಲೇಶ್!

ಸಾರಾಂಶ

ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಹಾಗೂ ಮಾಯಾವತಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹೊಡೆತ ನೀಡಿದ್ದಾರೆ. ಸದ್ದಿಲ್ಲದೇ ಸೀಟು ಹಂಚಿಕೆ ಮಾಡಿಕೊಂಡಿರುವ ಉಭಯ ಪಕ್ಷಗಳು, ಇತರ ಮೈತ್ರಿ ಪಕ್ಷಗಳಿಗೆ ಒಂದಂಕಿಯ ಸೀಟುಗಳನ್ನು ಉಳಿಸಿದೆ. ಬಿಎಸ್‌ಪಿ ಹಾಗೂ ಸಮಾಜವಾದಿ ಪಕ್ಷ ಮಾಡಿರುವ ಸೀಟು ಹಂಚಿಕೆ ವಿವರ ಇಲ್ಲಿದೆ ನೋಡಿ

ಲಕ್ನೋ[ಜ.05]: BSP ನಾಯಕಿ ಮಾಯಾವತಿ ಹಾಗೂ ಸಮಾಜವಾದಿ ಪಾರ್ಟಿ ನಾಯಕ ಅಖಿಲೇಶ್ ಯಾದವ್ 2019ರ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ಲೆಕ್ಕಾಚಾರದ ಕೊನೆಯ ಘಟ್ಟಕ್ಕೆ ತಲುಪಿದ್ದಾರೆ. 

ಲಭ್ಯವಾದ ಮಾಹಿತಿ ಅನ್ವಯ ಅಖಿಲೇಶ್ ಯಾದವ್ ಈಗಾಗಲೇ ಪ್ರಸ್ತಾಪಿಸಲಾದ ಮೈತ್ರಿಯ ಕುರಿತಾಗಿ ಮಾತುಕತೆ ನಡೆಸಲು ಮಾಯಾವತಿಯನ್ನು ಭೇಟಿಯಾಗಿದ್ದಾರೆನ್ನಲಾಗಿದೆ. ಹೀಗಿದ್ದರೂ ಉಭಯ ಪಕ್ಷಗಳು ಈ ಕುರಿತಾಗಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ ಎರಡೂ ಪಕ್ಷಗಳು ತಲಾ 37-37 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು ಹೇಳಲಾಗಿದೆ. 

ಉತ್ತರ ಪ್ರದೇಶದಲ್ಲಿ ಒಟ್ಟು 80 ಕ್ಷೇತ್ರಗಳಿದ್ದು ಉಳಿದ 6 ಕ್ಷೇತ್ರಗಳನ್ನು ಕಾಂಗ್ರೆಸ್, ರಾಷ್ಟ್ರೀಯ ಲೋಕದಳ್ ಹಾಗೂ ಇತರ ಕಿರಿಯ ಪಕ್ಷಗಳಿಗೆಂದು ಉಳಿಸಲಾಗಿದೆ. ಒಂದು ವೆಳೆ ಈ ಮಹಾಘಟಬಂಧನ ಮುಂದುವರೆದರೆ ಬಿಜೆಪಿ ಸೇರಿದಂತೆ ಕಾಂಗ್ರೆಸ್‌ಗೂ ಬಹುದೊಡ್ಡ ಹೊಡೆತ ನೀಡಲಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು