ಅಖಿಲೇಶ್ ಯಾದವ್ ರಿಂದ ವಿವಾದಾತ್ಮಕ ಹೇಳಿಕೆ

Published : Jan 29, 2017, 03:10 PM ISTUpdated : Apr 11, 2018, 01:09 PM IST
ಅಖಿಲೇಶ್ ಯಾದವ್ ರಿಂದ ವಿವಾದಾತ್ಮಕ ಹೇಳಿಕೆ

ಸಾರಾಂಶ

ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಇಷ್ಟು ದಿನ  ಅಪ್ಪ-ಮಗನ ಕಿತ್ತಾಟದಲ್ಲಿ ಸುದ್ದಿಯಲ್ಲಿದ್ದರು. ಈಗ ತಾವೇ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ನವದೆಹಲಿ (ಜ.29): ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಇಷ್ಟು ದಿನ  ಅಪ್ಪ-ಮಗನ ಕಿತ್ತಾಟದಲ್ಲಿ ಸುದ್ದಿಯಲ್ಲಿದ್ದರು. ಈಗ ತಾವೇ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಜೊತೆ ಅಖಿಲೇಶ್ ಯಾದವ್ ಜಂಟಿ ಪತ್ರಿಕಾಗೋಷ್ಟಿ ನಡೆಸುವಾಗ ಮಾಯಾವತಿಯವರ ಗಾತ್ರದ ಬಗ್ಗೆ ಗೇಲಿ ಮಾಡಿದರು.

ಮೈತ್ರಿಕೂಟದಲ್ಲಿ ಬಿಎಸ್ಪಿ ಭಾಗಿಯಾಗುತ್ತದೆಯೇ ಎನ್ನುವ ಪತ್ರಕರ್ತರ ಪ್ರಶ್ನೆಗೆ,  ‘ನಾವು ಅವರಿಗೆ ಹೇಗೆ ಜಾಗ ಕೊಡುವುದು? ಅವರ ಪಕ್ಷದ ಚಿಹ್ನೆ ಆನೆಯ ಹಾಗೆ ಅವರಿಗೂ ತುಂಬಾ ಜಾಗಬೇಕು’ ಎಂದು ಅಖಿಲೇಶ್ ಯಾದವ್ ಗೇಲಿ ಮಾಡಿದ್ದಾರೆ.

ಆದರೆ ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮಾಯಾವತಿಯನ್ನು ಹೊಗಳಿದ್ದಾರೆ. ಮಾಯಾವತಿಯವರು ಅಧಿಕಾರದಲ್ಲಿದ್ದಾಗ ಕೆಲವು ತಪ್ಪುಗಳನ್ನು ಮಾಡಿದ್ದಾರೆ. ಆದರೆ ಆರ್ ಎಸ್ ಎಸ್ ಹಾಗೆ ಅಪಾಯಕಾರಿಯಲ್ಲ. ಅವರ ಸಿದ್ಧಾಂತಗಳು ದೇಶಕ್ಕೆ ಮಾರಕವಲ್ಲ. ಮಾಯವತಿ ಜೀಯನ್ನು ಆರ್ ಎಸ್ ಎಸ್ ಜೊತೆ ಹೋಲಿಸಬೇಡಿ. ನನಗೆ ವೈಯಕ್ತಿಕವಾಗಿ ಅವರ ಬಗ್ಗೆ ಗೌರವವಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ