
ನವದೆಹಲಿ (ಜ.10): ಜಮ್ಮು ಕಾಶ್ಮೀರದ ಅಖನೂರು ಪ್ರದೇಶದಲ್ಲಿರುವ ಜಿಆರ್ ಇಎಫ್ ಕ್ಯಾಂಪ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ ಮೂವರು ಸೈನಿಕರ ಕುಟುಂಬಕ್ಕೆ ತಲಾ 1 ಲಕ್ಷ ರೂಗಳನ್ನು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಘೋಷಿಸಿದ್ದಾರೆ.
ಅದೇ ರೀತಿ ದಾಳಿಯಲ್ಲಿ ಗಾಯಗೊಂಡವರಿಗೆ 25 ಸಾವಿರ ರೂಗಳನ್ನು ನೀಡುವುದಾಗಿ ಘೋಷಿಸಿದ್ದಾರೆ.
ನಿನ್ನೆ ರಾತ್ರಿ 1.15 ರ ಸುಮಾರಿಗೆ ಅಖನೂರ್ ಪ್ರದೇಶದ ಜಿಆರ್ ಇ ಎಫ್ ಕ್ಯಾಂಪ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಆ ಸಂದರ್ಭದಲ್ಲಿ 10 ಮಂದಿ ಯೋಧರು ಆ ಕ್ಯಾಂಪ್ ನಲ್ಲಿದ್ದರು ಎನ್ನಲಾಗಿದೆ. ಸೇನೆ ಕಾರ್ಯಾಚರಣೆ ಮುಂದುವರೆಸಿದೆ. ಆ ಪ್ರದೇಶದಲ್ಲಿ ಹೈ ಅಲರ್ಟ್ ಜಾರಿಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.